Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುಟ್ಟಾಗಿ ಉಂಗುರ ಬದಲಿಸಿಕೊಂಡ್ರಾ ವಸಿಷ್ಠ ಸಿಂಹ- ಹರಿಪ್ರಿಯಾ?
ಸ್ಯಾಂಡಲ್ವುಡ್ನಲ್ಲಿ ಸಾಲು ಸಾಲು ಶುಭ ಸಮಾರಂಭಗಳು ನಡೀತಿದೆ. ಇತ್ತೀಚೆಗೆ ನಟಿ ಅದಿತಿ ಪ್ರಭುದೇವ ಹಸೆಮಣೆ ಏರಿದ್ದರು. ಇದೀಗ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಗುಟ್ಟಾಗಿ ಉಂಗುರ ಬದಲಿಸಿಕೊಂಡಿದ್ದಾರೆ ಎಂದು ವರಿದಿಯಾಗಿದೆ.
ಕೆಲ ದಿನಗಳಿಂದ ವಸಿಷ್ಠ ಹಾಗೂ ಹರಿಪ್ರಿಯಾ ನಡುವೆ ಲವ್ವಿ ಡವ್ವಿ ನಡೀತಿದೆ ಎನ್ನುವ ಗುಸುಗುಸು ಕೇಳಿಬರ್ತಿತ್ತು. ಮೊನ್ನೆಯಷ್ಟೆ ಇದಕ್ಕೆ ಇಂಬು ನೀಡುವಂತೆ ಏರ್ಪೋರ್ಟ್ನಲ್ಲಿ ಜೋಡಿ ಒಟ್ಟಿಗೆ ಕೈ ಕೈ ಹಿಡಿದು ಅಡ್ಡಾಡಿತ್ತು. ಆ ಫೋಟೊಗಳು ವೈರಲ್ ಆಗಿದ್ದವು. ಇಂದು(ಡಿಸೆಂಬರ್ 2) ಆರ್. ಆರ್ ನಗರದ ಹರಿಪ್ರಿಯಾ ನಿವಾಸದಲ್ಲಿ ನಿಶ್ಚಿತಾರ್ಥ ನೆರವೇರಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಬಹಳ ಗುಟ್ಟಾಗಿ ಜೋಡಿಯ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ ಎನ್ನಲಾಗ್ತಿದೆ.
ಚಿತ್ರಮಂದಿರದಲ್ಲಿ ಅಬ್ಬರಿಸಿದ್ದ 'ಕಾಂತಾರ' ಚಿತ್ರ ಓಟಿಟಿಯಲ್ಲಿ ಗೆಲ್ತಾ, ಸೋಲ್ತಾ?
ಕೆಲ ದಿನಗಳ ಹಿಂದೆ ವಸಿಷ್ಠ, ಹರಿಪ್ರಿಯಾ ದುಬೈಗೆ ಹೋಗಿ ಬಂದಿದ್ದರು. ಮದುವೆಗೆ ಈಗಾಗಲೇ ಸಿದ್ಧತೆ ನಡೀತಿದೆಯಂತೆ. ಧನುರ್ಮಾಸ ಮುಗಿದ ಮೇಲೆ ಫೆಬ್ರವರಿಯಲ್ಲಿ ಜೋಡಿ ಹಸೆಮಣೆ ಏರಲಿದೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇತ್ತೀಚೆಗೆ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು. ಆಗ ಪಕ್ಕದಲ್ಲೇ ವಸಿಷ್ಠ ಸಿಂಹ ಕೂಡ ಇದ್ದರು. ತೆಲುಗಿನ 'ಎವರು' ಸಿನಿಮಾ ರೀಮೇಕ್ನಲ್ಲಿ ವಸಿಷ್ಠ ಹಾಗೂ ಹರಿಪ್ರಿಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಶೂಟಿಂಗ್ ಸಮಯದಲ್ಲೇ ಇಬ್ಬರ ನಡುವೆ ಪ್ರೀತಿ ಹುಟ್ಟಿದ್ದು ಈಗ ಇಬ್ಬರು ಹಸೆಮಣೆ ಏರಲು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ.
ಕಳೆದೊಂದು ವಾರದಿಂದ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಡೇಟಿಂಗ್, ಎಂಗೇಜ್ಮೆಂಟ್ ಬಗ್ಗೆ ಗುಸುಗುಸು ಶುರುವಾಗಿದೆ. ಆದರೆ ಈ ಬಗ್ಗೆ ಇಬ್ಬರು ಮಾತನಾಡುವ ಗೋಜಿಗೆ ಹೋಗಿಲ್ಲ. ಆದರೆ ಈಗ ಇಬ್ಬರ ಎಂಗೇಜ್ಮೆಂಟ್ ನಡೆದಿರುವ ಬಗ್ಗೆ ವರದಿಯಾಗಿದ್ದು ಶೀಘ್ರದಲ್ಲೇ ಈ ಬಗ್ಗೆ ವಸಿಷ್ಠ ಸಿಂಹ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.