Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಂಗನಾಯಕಿ'ಯಾದ ನಟಿ ಅದಿತಿ ಪ್ರಭುದೇವ
ನಟಿ ಅದಿತಿ ಪ್ರಭುದೇವ ಒಂದರ ನಂತರ ಒಂದು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಹೊಸ ಹೀರೋಗಳ ಜೊತೆಗೆ ಮಾತ್ರವಲ್ಲದೆ ಜಗ್ಗೇಶ್ ಅವರ ಜೊತೆಗೆ 'ತೋತಾಪುರಿ' ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ.
ತಮ್ಮ ಸಿನಿಮಾ ಜರ್ನಿಯಲ್ಲಿ ಅದಿತಿ ಇದೀಗ ಮೊದಲ ಬಾರಿಗೆ ಅವರು ಮಹಿಳಾ ಪ್ರಧಾನ ಸಿನಿಮಾ ಮಾಡುತ್ತಿದ್ದಾರೆ. ಅದಿತಿ 'ರಂಗನಾಯಕಿ' ಆಗಲು ಸಿದ್ಧರಾಗಿದ್ದಾರೆ. 'ರಂಗನಾಯಕಿ' ಎಂಬ ಹೊಸ ಸಿನಿಮಾದ ನಾಯಕಿಯಾಗಿ ಅತಿಧಿ ಆಯ್ಕೆ ಆಗಿದ್ದಾರೆ.
'ತೋತಾಪುರಿ'ಯಲ್ಲಿ 'ಶಕೀಲ ಭಾನು' ಆದ ಅದಿತಿ ಪ್ರಭುದೇವ
'ರಂಗನಾಯಕಿ' ಹೆಸರು ಕೇಳಿದ ತಕ್ಷಣ ಪುಟ್ಟಣ್ಣ ಕಣಗಾಲ್ ಅವರ ಚಿತ್ರ ನೆನಪಾಗುತ್ತದೆ. ಆದರೆ, ಆ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲವಂತೆ. ಒಬ್ಬ ಸಿಟಿ ಹುಡುಗಿ ಹೇಗೆ ತನಗೆ ಆಗುವ ಅನ್ಯಾಯದ ವಿರುದ್ಧ ಹೋರಾಡುತ್ತಾರೆ ಎನ್ನುವುದು ಈ ಸಿನಿಮಾದ ಕಥೆಯಾಗಿದೆ.
ಮಹಿಳಾ ಸಬಲೀಕರಣದ ಬಗ್ಗೆ ಸಿನಿಮಾದ ಕಥೆ ಇದ್ದು, ದಯಾಳ್ ಪದ್ಮನಾಭನ್ ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ.
'ಬಜಾರ್' ಸಿನಿಮಾದ ನಂತರ 'ತೋತಾಪುರಿ', 'ಸಿಂಗ' ಸೇರಿದಂತೆ ಮೂರ್ನಾಲ್ಕು ಸಿನಿಮಾಗಳಲ್ಲಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.