Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಮೊಗ್ಗದಲ್ಲಿ ಚೆಲುವಿನ ಚಿಲಿಪಿಲಿ ಅಮೂಲ್ಯ ಪ್ರಚಾರ
ಇತ್ತೀಚೆಗೆ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗಿನ 'ಶ್ರಾವಣಿ ಸುಬ್ರಹ್ಮಣ್ಯ' ಚಿತ್ರದ ಮೂಲಕ ಮತ್ತೆ ಫಾರ್ಮ್ ಗೆ ಮರಳಿದ ತಾರೆ ಅಮೂಲ್ಯ. ಇದೀಗ ಅವರು ಗಜಕೇಸರಿ ಚಿತ್ರದಲ್ಲಿ ಬಿಜಿಯಾಗಿದ್ದರು ಚುನಾವಣಾ ಪ್ರಚಾರಕ್ಕಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದಾರೆ.
ಮಂಗಳವಾರದಿಂದ
(ಏ.9)
ಅಮೂಲ್ಯ
ಅವರು
ಗೀತಾ
ಶಿವರಾಜ್
ಕುಮಾರ್
ಪರ
ಪ್ರಚಾರ
ಮಾಡಲಿದ್ದಾರೆ.
ನಾನು
ಯಾವುದೇ
ಪಕ್ಷದ
ಪರ
ಅಲ್ಲ
ಎಂದಿರುವ
ಅವರು
ಶಿವಣ್ಣ
ಹಾಗೂ
ಗೀತಾ
ಅವರ
ಮೇಲಿನ
ಅಭಿಮಾನದಿಂದ
ಪ್ರಚಾರದಲ್ಲಿ
ಭಾಗಿಯಾಗುತ್ತಿರುವುದಾಗಿ
ತಿಳಿಸಿದ್ದಾರೆ.
ಮಂಡ್ಯದಲ್ಲಿ ಪ್ರಚಾರಕ್ಕೆ ನಟಿ ರಮ್ಯಾ ಅವರು ಕರೆದರೂ ಹೋಗುತ್ತೀರಾ ಎಂದು ಕೇಳಿದರೆ, ಖಂಡಿತ ಹೋಗುತ್ತೇನೆ. ನಾನು ಯಾವತ್ತಿದ್ದರೂ ಕಲಾವಿದರ ಪರವೇ ಹೊರತು ಯಾವುದೇ ಪಕ್ಷ ಅಥವಾ ರಾಜಕೀಯದ ಪರ ಅಲ್ಲ ಎಂದಿದ್ದಾರೆ.
ಮುಂದೆ ತಾವೂ ರಾಜಕೀಯಕ್ಕೆ ಬರುವ ಬಗ್ಗೆ ಪ್ಲಾನ್ ಏನಾದರೂ ಇದೆಯೇ ಎಂದರೆ, ಅಯ್ಯೋ ಆ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎನ್ನುವ ಅವರು ಹೆಚ್ಚಿಗೆ ಕೇಳಿದರೆ ನನಗೆ ರಾಜಕೀಯದ ಬಗ್ಗೆ ಏನೇನೂ ಗೊತ್ತಿಲ್ಲ ಎನ್ನುತ್ತಾರೆ.
ಒಟ್ಟಾರೆಯಾಗಿ ಗೀತಾ ಶಿವರಾಜ್ ಕುಮಾರ್ ಪರ ಉಪೇಂದ್ರ, ಸಂಜನಾ ಪ್ರಚಾರ ಮಾಡಿದ್ದಾರೆ. ಇದೀಗ ಅಮೂಲ್ಯ ಸಹ ಗೀತಾ ಶಿವರಾಜ್ ಕುಮಾರ್ ಪರ ಮತಯಾಚಿಸಲು ಹೊರಟಿದ್ದಾರೆ. ಏಪ್ರಿಲ್ 10 ಮತ್ತು 11ರಂದು ಚಿತ್ರನಟರಾದ ಜೈ ಜಗದೀಶ್, ಶ್ರೀಮುರಳಿ ಸಹ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. (ಒನ್ ಇಂಡಿಯಾ ಕನ್ನಡ)