ರಾಮ ಮಂದಿರ ನಿರ್ಮಾಣಕ್ಕೆ ಭಾರಿ ಮೊತ್ತ ದೇಣಿಗೆ ನೀಡಿದ ಅಮೂಲ್ಯ ದಂಪತಿ
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಚಾಲನೆ ದೊರೆತಿದ್ದು. ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ದೇಶದಾದ್ಯಂತ ನಡೆಯುತ್ತಿದೆ.
Recommended Video
ಸಮರ್ಪಣಾ ಅಭಿಯಾನದ ಹೆಸರಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಣೆ ನಡೆಯುತ್ತಿದ್ದು, ಹಲವಾರು ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು, ಕ್ರೀಡಾಪಟುಗಳು ಸೇರಿದಂತೆ ಹಲವಾರು ಮಂದಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ.
ಕನ್ನಡದ ನಟಿ ಅಮೂಲ್ಯಾ ಹಾಗೂ ಪತಿ ಜಗದೀಶ್ ಸಹ ರಾಮ ಮಂದಿರ ನಿರ್ಮಾಣಕ್ಕೆ ದೊಡ್ಡ ಮೊತ್ತದ ಹಣವನ್ನೇ ದೇಣಿಗೆ ನೀಡಿದ್ದಾರೆ. ಅಮೂಲ್ಯ ಪತಿ ಜಗದೀಶ್ ಅವರು ಬರೋಬ್ಬರಿ 1.50 ಲಕ್ಷ ಹಣವನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ. ದೇಣಿಗೆ ನೀಡಿದ ರಸೀದಿಯ ಚಿತ್ರವನ್ನು ಅಮೂಲ್ಯ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ.

ಅಮೂಲ್ಯ ಮಾವ ರಾಜಕಾರಣಿ ಜಿ.ಎಚ್.ರಾಮಚಂದ್ರ ಅವರೂ ಸಹ ದೇಣಿಗೆ ನೀಡಿದ್ದು. ರಾಮಚಂದ್ರ ಅವರು ಬರೋಬ್ಬರಿ 1 ಲಕ್ಷ ಮೊತ್ತವನ್ನು ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ ನೀಡಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ದಂಪತಿ, 'ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ದೇಶಾದ್ಯಂತ ನಡೆಯುತ್ತಿದ್ದು, ಪ್ರತಿಯೊಬ್ಬರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ನಿಮಿತ್ತ ನಮ್ಮ ಮನೆಗೆ ಬಿಜೆಪಿ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅರುಣ್ ಕುಮಾರ್ ಜೀ ರವರು ಆಗಮಿಸಿದ್ದರು. ಪ್ರತಿ ವರ್ಷವೂ ಜನ್ಮದಿನಾಚರಣೆಗಾಗಿ ವ್ಯಯಿಸುತ್ತಿದ್ದ ಮೊತ್ತಕ್ಕೆ ನಮ್ಮಿಂದಾದ ಮೊತ್ತವನ್ನು ಸೇರಿಸಿ ಪ್ರಭು ಶ್ರೀರಾಮ ಮಂದಿರಕ್ಕಾಗಿ ಅರ್ಪಿಸಿದೆವು. ಈ ಕ್ಷಣ ನಮಗೆ ಅತ್ಯಂತ ಸಾರ್ಥಕತೆಯ ಕ್ಷಣವೆನಿಸಿತು' ಎಂದಿದ್ದಾರೆ.
ಕನ್ನಡದ ನಟಿ ಪ್ರಣಿತಾ ಸುಭಾಷ್ ಸಹ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ನಟ ಪವನ್ ಕಲ್ಯಾಣ್ 30 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟ ಅಕ್ಷಯ್ ಕುಮಾರ್ ಸಹಸ ದೊಡ್ಡ ಮೊತ್ತದ ದೇಣಿಗೆಯನ್ನು ರಾಮ ಮಂದಿರ ನಿರ್ಮಾಣಕ್ಕೆ ನೀಡಿದ್ದಾರೆ.


Click it and Unblock the Notifications











