Don't Miss!
- Automobiles Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- News ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ: ಕೊಲೆಗಾರನಿಗೆ ಶಿಕ್ಷೆ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆನೆ ಹೊತ್ತ ಅಮೂಲ್ಯ : ಕುಮಾರಣ್ಣನ ಪಕ್ಷ ಸೇರಿದ ಗೋಲ್ಡನ್ ಕ್ವೀನ್
Recommended Video
ನಟಿ ಅಮೂಲ್ಯ ಇದೀಗ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಅಮೂಲ್ಯ ಮಾವ ರಾಮಚಂದ್ರ ಬಿ ಜೆ ಪಿ ಪಕ್ಷ ತೆರೆದು ಇಂದು ಜೆಡಿಎಸ್ ಪಕ್ಷ ಸೇರಿದ್ದು, ನಟಿ ಅಮೂಲ್ಯ ತೆನೆ ಹೊರಲು ಸಿದ್ಧವಾಗಿದ್ದಾರೆ.
ಅಂದಹಾಗೆ, ಇಂದು ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅಧಿಕೃತವಾಗಿ ಜೆ ಡಿ ಎಸ್ ಪಕ್ಷ ಸೇರಿಕೊಂಡರು. ಬೆಂಗಳೂರಿನ ಜೆ ಡಿ ಎಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಮೂಲಕ ಅವರನ್ನು ಪಕ್ಷಕ್ಕೆ ಆಹ್ವಾನ ಮಾಡಿಕೊಳ್ಳಲಾಗಿದೆ. ಈ ವೇಳೆ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಕೂಡ ಜೆ ಡಿ ಎಸ್ ಪಕ್ಷದ ಶಾಲ್ ಹೊತ್ತು ಕುಮಾರಣ್ಣನಿಗೆ ಜೈ ಎಂದರು.
ಬಿಜೆಪಿ ತೊರೆದು ಜೆಡಿಎಸ್ ಸೇರಿದ ನಟಿ ಅಮೂಲ್ಯ ಮಾವ
ಇನ್ನು ಮಾಜಿ ಕಾರ್ಪೋರೇಟರ್ ಆಗಿರುವ ಅಮೂಲ್ಯ ಮಾವ ರಾಮಚಂದ್ರ ಈ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ಲಾನ್ ಮಾಡಿದ್ದರು. ಜೊತೆಗೆ ಬಿ ಜೆ ಪಿ ಪಕ್ಷದಿಂದ ಆರ್ ಆರ್ ನಗರದಲ್ಲಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಬಿ ಜೆ ಪಿ ಪಕ್ಷದಿಂದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ರಾಮಚಂದ್ರ ಈಗ ಪಕ್ಷ ಬದಲಾಯಿಸಿದ್ದಾರೆ. ಜೆ ಡಿ ಎಸ್ ಪಕ್ಷದ ಮೂಲಕ ಚುನಾವಣಾ ಅಖಾಡಕ್ಕೆ ಇಳಿಯುವ ಯೋಚನೆ ಮಾಡಿದ್ದಾರೆ.
ರಾಮಚಂದ್ರ ಅವರ ಜೊತೆಗೆ ಕಾಂಗ್ರೆಸ್ ಟಿಕೆಟ್ ವಂಚಿತರಾದ ಹೇಮಚಂದ್ರ ಸಾಗರ್ ಮತ್ತು ಸಿ ವಿ ರಾಮನ್ ನಗರ ಟಿಕೆಟ್ ಆಕಾಂಕ್ಷಿ ರಮೇಶ್ ಸಹ ಜೆ ಡಿ ಎಸ್ ಪಕ್ಷವನ್ನು ಸೇರಿದ್ದಾರೆ. ಇನ್ನು ಚುನಾವಣೆಯ ದಿನ ಹತ್ತಿರ ಆಗುತ್ತಿದ್ದಂತೆ ಟಿಕೆಟ್ ಸಿಗದ ಮುಖಂಡರು ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿದ್ದಾರೆ.