ಸಿದ್ದಾರ್ಥ್ ನಿಧನಕ್ಕೆ ನಟಿ, ಸಂಸದೆ ಸುಮಲತಾ ಸಂತಾಪ
Recommended Video
ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯಮಿ ಸಿದ್ದಾರ್ಥ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ ಹಾಗೂ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಟ್ವಿಟ್ಟರ್ ಖಾತೆಯಲ್ಲಿ ಸಿದ್ದಾರ್ಥ್ ಬಗ್ಗೆ ಬರೆದುಕೊಂಡಿದ್ದಾರೆ.
''ನಮ್ಮ ಮಂಡ್ಯ ಜಿಲ್ಲೆಯವರಾದ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ದಾರ್ಥ್ ಅವರ ಸಾವು ತೀವ್ರ ಆಘಾತ ತಂದಿದೆ.'' ಎಂದು ದುಃಖ ಹಂಚಿಕೊಂಡಿದ್ದಾರೆ.
VG Siddhartha Death LIVE: ಚಿಕ್ಕಮಗಳೂರಿನತ್ತ ಹೊರಟ ಸಿದ್ಧಾರ್ಥ ಮೃತದೇಹ ಹೊತ್ತ ಆಂಬುಲೆನ್ಸ್
''ಎಸ್.ಎಂ.ಕೃಷ್ಣರವರಿಗೂ ಹಾಗೂ ಅವರ ಕುಟುಂಬದವರಿಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಸಿದ್ದಾರ್ಥ್ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ'' ಎಂದು ಸುಮಲತಾ ಪ್ರಾರ್ಥನೆ ಮಾಡಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಟ ಅಂಬರೀಶ್ ಜೊತೆಗೆ ಒಳ್ಳೆಯ ಸ್ನೇಹ ಹೊಂದಿದ್ದರು. ಹೀಗಾಗಿ, ಸಿದ್ದಾರ್ಥ್ ಪರಿಚಯ ಕೂಡ ಅಂಬರೀಶ್ ಕುಟುಂಬಕ್ಕೆ ಇತ್ತು. ಇತ್ತೀಚಿಗೆ ಸುಮಲತಾ ಮಂಡ್ಯ ಚುನಾವಣೆಯ ವೇಳೆ ಎಸ್.ಎಂ.ಕೃಷ್ಣ ಜೊತೆಗೆ ಮಾತುಕತೆ ನಡೆಸಿದ್ದರು.
ಇಂದು ಪತ್ತೆಯಾದ ಸಿದ್ದಾರ್ಥ್ ಶವ
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದ ಸಿದ್ದಾರ್ಥ್, ಮಂಗಳೂರಿನ ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಕಣ್ಮರೆಯಾಗಿದ್ದರು. ಮಂಗಳವಾರ ಬೆಳಗ್ಗಿನಿಂದ ರಾತ್ರಿವರೆಗೂ ಹುಡುಕಾಟ ನಡೆಸಲಾಗಿತ್ತು. ನೇತ್ರಾವತಿ ಸಮುದ್ರ ಸೇರುವ ಮೊದಲೇ ದಂಡೆಯಲ್ಲಿ ಶವ ಇಂದು (ಬುಧವಾರ) ಬೆಳಗ್ಗೆ ಪತ್ತೆಯಾಗಿದೆ.


Click it and Unblock the Notifications











