Don't Miss!
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಲಿವುಡ್ ಗೆ ಹಾರಿದ ಮತ್ತೋರ್ವ ಕನ್ನಡದ ನಟಿ
ಟಾಲಿವುಡ್ ನಲ್ಲಿ ಸದ್ಯ ಕನ್ನಡದ ನಟಿಮಣಿಯರದ್ದೆ ಹವಾ. ಸ್ಯಾಂಡಲ್ ವುಡ್ ನಲ್ಲಿ ಒಂದೆರಡು ಸಿನಿಮಾ ಮಾಡುತ್ತಿದ್ದಂತೆ ಬಹುತೇಕ ನಟಿಯರು ಪಕ್ಕದ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ತೆಲುಗು ಸಿನಿಮಾರಂದಲ್ಲಿ ಮಿಂಚಿದರೆ ದೊಡ್ಡ ಮಟ್ಟದ ಜನಪ್ರಿಯತೆ ಸಿಗಲಿದೆ ಎನ್ನುವುದು ನಟಿಯರ ಲೆಕ್ಕಾಚಾರ ಇದ್ದರೂ ಇರಬಹುದು.
ಈಗಾಗಲೇ ಸಾಕಷ್ಟು ಕನ್ನಡದ ನಟಿಯರು ಟಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ. ಅದೇ ಸಾಲಿಗೀಗ ಕನ್ನಡ ಮತ್ತೋರ್ವ ನಟಿ ಅನಿತಾ ಭಟ್ ಕೂಡ ಸೇರಿಕೊಂಡಿದ್ದಾರೆ. ಹೌದು, ಸೈಕೋ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬಂದ ನಟಿ ಅನಿತಾ ಭಟ್ ಇದೀಗ ತೆಲುಗು ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ.
ವಾಟ್ಸ್ಆಪ್ ನಂಬರ್ ಕೊಡ್ತೀನೆಂದು ಹೇಳಿ ಕಾಗೆ ಹಾರಿಸಿದ ಹಾಟ್ ನಟಿ
ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಹಾಟ್ ನಟಿ ಅನಿತಾ ಭಟ್ ಇತ್ತೀಚೀಗಷ್ಟೆ ಬಳೆಪೇಟೆ ಸಿನಿಮಾದ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಹೌದು, ಅನಿತಾ ಭಟ್ ನಟನೆಯ ಬಳೆಪೇಟೆ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಅನಿತಾ ಟಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಅಂದಹಾಗೆ ಅನಿತಾ ಭಟ್ 'ಕೃಷ್ಣ ಲಂಕಾ' ಸಿನಿಮಾ ಮೂಲಕ ತೆಲುಗು ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಚಿತ್ರದಲ್ಲಿ ಅನಿತಾ ಭಟ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಕೃಷ್ಣ ಲಂಕಾ ಸಿನಿಮಾದಲ್ಲಿ ನಾಯಕನಾಗಿ ಪರುಚೂರು ರವಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಕಾರ್ತಿಕೇಯನ್ ನಿರ್ದೇಶನ ಮಾಡುತ್ತಿದ್ದಾರೆ.
Recommended Video
ಕೃಷ್ಣ ಲಂಕಾ ರೌಡಿಸಂ ಹಿನ್ನಲೆ ಇರುವ ಸಿನಿಮಾ ಎನ್ನಲಾಗುತ್ತಿದೆ. ಅಂದಹಾಗೆ ಈಗಾಗಲೇ ಅನಿತಾ ಭಟ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಫೆಬ್ರವರಿಯಿಂದ ಪೂರ್ಣ ಪ್ರಮಾಣದ ಚಿತ್ರೀಕರಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.