Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಿ ಶೇಷಾದ್ರಿ ನಿರ್ದೇಶನದಲ್ಲಿ ಕಾರಂತರ ಕಾದಂಬರಿ: 'ಮೂಕಜ್ಜಿ'ಯಾದ ಜಯಶ್ರೀ
Recommended Video
ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಶಿವರಾಮ ಕಾರಂತರ ಶ್ರೇಷ್ಠ ಕಾದಂಬರಿ 'ಮೂಕಜ್ಜಿಯ ಕನಸುಗಳು' ಈಗ ತೆರೆಮೇಲೆ ಬರ್ತಿದೆ. ಕನ್ನಡಿಗರ ಹೃದಯದಲ್ಲಿ ಜಾಗ ಪಡೆದುಕೊಂಡಿರುವ ಮೂಕಜ್ಜಿ ಈಗ ಪರದೆ ಮೇಲೆ ಜೀವ ಪಡೆದುಕೊಳ್ಳುತ್ತಿದ್ದಾರೆ.
ಖ್ಯಾತ ನಿರ್ದೇಶಕ ಪಿ ಶೇಷಾದ್ರಿ 'ಮೂಕಜ್ಜಿಯ ಕನಸುಗಳು' ಕಾದಂಬರಿಯನ್ನ ಸಿನಿಮಾ ಮಾಡ್ತಿದ್ದು, ಪ್ರಮುಖ ಪಾತ್ರಕ್ಕೆ ಹಿರಿಯ ನಟಿ ಬಿ ಜಯಶ್ರೀ ಅವರನ್ನ ಆಯ್ಕೆ ಮಾಡಿಕೊಂಡಿದ್ದಾರೆ.
ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ ಕಾರಂತರ 'ಮೂಕಜ್ಜಿಯ ಕನಸುಗಳು'
ಹಲವು ವರ್ಷಗಳಿಂದ ಈ ಕಾದಂಬರಿಯನ್ನ ಸಿನಿಮಾ ಮಾಡಬೇಕು ಎಂಬ ಆಸೆಯನ್ನ ಹೊಂದಿದ್ದ ಪಿ ಶೇಷಾದ್ರಿ ಅವರು ಈಗ ಪ್ರೀ-ಪ್ರೊಡಕ್ಷನ್ ಕೆಲಸ ಮುಗಿಸಿ ಶೂಟಿಂಗ್ ಗೆ ಹೋಗಲು ಸಿದ್ಧವಾಗಿದ್ದಾರೆ.
ಸದ್ಯ, ಚಿತ್ರಕಥೆ ಸಂಪೂರ್ಣವಾಗಿ ಮುಗಿದಿದೆ, ಸೂಕ್ತ ಲೊಕೇಶನ್ ಹುಡುಕುತ್ತಿದ್ದ ಆದಷ್ಟೂ ಬೇಗ ಚಿತ್ರೀಕರಣ ಆರಂಭಿಸಲಿದ್ದಾರೆ.
ಈ ಬಗ್ಗೆ ಮಾತನಾಡಿದ್ದ ಪಿ ಶೇಷಾದ್ರಿ ಅವರು ''ಮೂಕಜ್ಜಿಯನ್ನು ನಾವು ನಮ್ಮದಾಗಿಸಿಕೊಳ್ಳುವುದು ನನಗೆ ದೊಡ್ಡ ಚಾಲೆಂಜ್. ಈ ಕೃತಿ ದೃಶ್ಯ ಮಾಧ್ಯಮಕ್ಕೆ ಸಲ್ಲುವಂತದಲ್ಲ. ಇಲ್ಲಿ ನಾಯಕ, ನಾಯಕಿ ಯಾರು ಇಲ್ಲ. ಕಾರಂತರೇ ಹೇಳುವ ಹಾಗೆ ಮೂಕಜ್ಜಿಯ ಕೂಡ ನಾಯಕಿ ಅಲ್ಲ. ಸಿನಿಮಾದ ಸೂತ್ರಗಳನ್ನು ಮೀರಿ ಈ ಚಿತ್ರ ಮಾಡಬೇಕು ಇದು ನನಗೆ ದೊಡ್ಡ ಸವಾಲು'' ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಅಂದ್ಹಾಗೆ, ಮೂಕಜ್ಜಿಯ ಕನಸುಗಳು' ಡಾ ಶಿವರಾಮ ಕಾರಂತರಿಗೆ ಜ್ಞಾನ ಪೀಠ ಪ್ರಶಸ್ತಿ ತಂದು ಕೊಟ್ಟ ಕಾದಂಬರಿಯಾಗಿದೆ. 1977ರಲ್ಲಿ ಈ ಕಾದಂಬರಿಯನ್ನು ಅವರು ರಚಿಸಿದ್ದು, ಅಜ್ಜಿ ಮತ್ತು ಮೊಮ್ಮಗನ ನಡುವಿನ ಸಂಭಾಷಣೆಯನ್ನು ಕಾರಂತರು ಅದ್ಭುತವಾಗಿ ಕಟ್ಟಿ ಕೊಟ್ಟಿದ್ದಾರೆ.