Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆದ ನಟಿ ಹರಿಪ್ರಿಯಾ
ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿದೆ. ಮೈಸೂರಿನಲ್ಲಿ ದಸರಾ ಉತ್ಸವ ಜೋರಾಗಿದೆ. ಅನೇಕರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಭಕ್ತಾದಿಗಳ ಸಂಖ್ಯೆಯೂ ಜಾಸ್ತಿ ಇದೆ. ಇದೇ ಸಮಯದಲ್ಲಿ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
ಅಂದ್ಹಾಗೆ ಹರಿಪ್ರಿಯಾ ಸದ್ಯ ಮೈಸೂರಿನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸತೀಶ್ ನೀನಾಸಂ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ದಸರಾ ಸಂಭ್ರಮದ ನಡುವೆಯೂ ಚಿತ್ರತಂಡ ಮೈಸೂರಿನಲ್ಲಿ ಶೂಟಿಂಗ್ ಮಾಡುತ್ತಿದೆ.
ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಉಪೇಂದ್ರ
ಶೂಟಿಂಗ್ ನಿಂದ ಬಿಡುವು ಮಾಡಿಕೊಂಡು ನಟಿ ಹರಿಪ್ರಿಯಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ಪಡೆದು ಸಂತಸಪಟ್ಟಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಬಗ್ಗೆ ನಟಿ ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
'ನವರಾತ್ರಿ ಶುಕ್ರವಾರ ಸಂಜೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿರುವುದು ಅಧ್ಭುತ. ದೇವಿ ಎಲ್ಲರನ್ನೂ ಆಶೀರ್ವಾದಿಸಲಿ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು' ಎಂದು ಬರೆದುಕೊಂಡಿದ್ದಾರೆ.
Recommended Video
ಚಿತ್ರೀಕರಣ ಕಾರಣ ಹರಿಪ್ರಿಯಾ ಇನ್ನು ಕೆಲವು ದಿನಗಳಕಾಲ ಮೈಸೂರಿನಲ್ಲೇ ಇರಲಿದ್ದಾರೆ. ಚಿತ್ರಕ್ಕೆ ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಕಾಶ್ ಅಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಹರಿಪ್ರಿಯಾ ಮತ್ತು ಸತೀಶ್ ನೀನಾಸಂ ಒಟ್ಟಿಗೆ ನಟಿಸುತ್ತಿದ್ದಾರೆ.