Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡೇಶ್ವರಿ ತಾಯಿಯ ಆಶೀರ್ವಾದ ಪಡೆದ ನಟಿ ಹರಿಪ್ರಿಯಾ
ನಾಡಿನಾದ್ಯಂತ ದಸರಾ ಸಂಭ್ರಮ ಮನೆಮಾಡಿದೆ. ಮೈಸೂರಿನಲ್ಲಿ ದಸರಾ ಉತ್ಸವ ಜೋರಾಗಿದೆ. ಅನೇಕರು ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಿದ್ದಾರೆ. ಹಬ್ಬದ ಸಮಯದಲ್ಲಿ ಭಕ್ತಾದಿಗಳ ಸಂಖ್ಯೆಯೂ ಜಾಸ್ತಿ ಇದೆ. ಇದೇ ಸಮಯದಲ್ಲಿ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
ಅಂದ್ಹಾಗೆ ಹರಿಪ್ರಿಯಾ ಸದ್ಯ ಮೈಸೂರಿನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಸತೀಶ್ ನೀನಾಸಂ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ದಸರಾ ಸಂಭ್ರಮದ ನಡುವೆಯೂ ಚಿತ್ರತಂಡ ಮೈಸೂರಿನಲ್ಲಿ ಶೂಟಿಂಗ್ ಮಾಡುತ್ತಿದೆ.
ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಉಪೇಂದ್ರ
ಶೂಟಿಂಗ್ ನಿಂದ ಬಿಡುವು ಮಾಡಿಕೊಂಡು ನಟಿ ಹರಿಪ್ರಿಯಾ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಚಾಮುಂಡಿ ತಾಯಿಯ ಆಶೀರ್ವಾದ ಪಡೆದು ಸಂತಸಪಟ್ಟಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಬಗ್ಗೆ ನಟಿ ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
'ನವರಾತ್ರಿ ಶುಕ್ರವಾರ ಸಂಜೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿರುವುದು ಅಧ್ಭುತ. ದೇವಿ ಎಲ್ಲರನ್ನೂ ಆಶೀರ್ವಾದಿಸಲಿ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು' ಎಂದು ಬರೆದುಕೊಂಡಿದ್ದಾರೆ.
Recommended Video
ಚಿತ್ರೀಕರಣ ಕಾರಣ ಹರಿಪ್ರಿಯಾ ಇನ್ನು ಕೆಲವು ದಿನಗಳಕಾಲ ಮೈಸೂರಿನಲ್ಲೇ ಇರಲಿದ್ದಾರೆ. ಚಿತ್ರಕ್ಕೆ ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಕಾಶ್ ಅಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಬಾರಿಗೆ ಹರಿಪ್ರಿಯಾ ಮತ್ತು ಸತೀಶ್ ನೀನಾಸಂ ಒಟ್ಟಿಗೆ ನಟಿಸುತ್ತಿದ್ದಾರೆ.