ತಾರೆ ಹೇಮಶ್ರೀ ಸಾವಿನ ಪ್ರಕರಣ ಇನ್ನೂ ನಿಗೂಢ
ಏತನ್ಮಧ್ಯೆ ಹೇಮಶ್ರೀ ಪತಿ ಸುರೇಂದ್ರ ಬಾಬು ಕಾರು ಚಾಲಕ ಸತೀಶ್ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಆತ ಸಿಕ್ಕಿದರೆ ಮಹತ್ವದ ಮಾಹಿತಿ ಲಭ್ಯವಾಗಲಿದೆ. ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಪೊಲೀಸ್ ವಶದಲ್ಲಿರುವ ಸುರೇಂದ್ರ ಬಾಬು ಅವರನ್ನೂ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ಆತನಿಂದ ನಿಖರವಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. ಸುರೇಂದ್ರ ಬಾಬು ವಿಚಾರಣೆಗೆ ಸಹಕರಿಸುತ್ತಿಲ್ಲ ಎನ್ನುತ್ತವೆ ಮೂಲಗಳು.
ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮಂಗಳವಾರ (ಅ.16) ಪೊಲೀಸರ ಕೈಸೇರುವ ಸಾಧ್ಯತೆಗಳಿವೆ. ಹೇಮಶ್ರೀ ಆಪ್ತಗೆಳೆಯ ಎನ್ನಲಾಗಿರುವ ಮಂಜುನಾಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆತನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಆಂಧ್ರಪದೇಶದ ಅನಂತಪುರದ ಫಾರ್ಮ್ ಹೌಸ್ ಮಾಲೀಕ ಮುರಳಿಯನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೇಮಶ್ರೀ ಚಿತಾಭಸ್ಮ ವಿಸರ್ಜನೆಗಾಗಿ ವಾರಾಣಾಸಿಗೆ ಹೋಗಿದ್ದ ಅವರ ಪೋಷಕರು ಮಂಗಳವಾರ (ಅ.16) ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ ಎಂಬ ಮಾಹಿತಿಯೂ ಇದೆ. (ಏಜೆನ್ಸೀಸ್)


Click it and Unblock the Notifications












