Don't Miss!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರೆ ಹೇಮಶ್ರೀ ಸಾವಿನ ಪ್ರಕರಣ ಇನ್ನೂ ನಿಗೂಢ
ಏತನ್ಮಧ್ಯೆ ಹೇಮಶ್ರೀ ಪತಿ ಸುರೇಂದ್ರ ಬಾಬು ಕಾರು ಚಾಲಕ ಸತೀಶ್ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಆತ ಸಿಕ್ಕಿದರೆ ಮಹತ್ವದ ಮಾಹಿತಿ ಲಭ್ಯವಾಗಲಿದೆ. ಆತನಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.
ಪೊಲೀಸ್ ವಶದಲ್ಲಿರುವ ಸುರೇಂದ್ರ ಬಾಬು ಅವರನ್ನೂ ಪೊಲೀಸರು ವಿಚಾರಣೆ ಒಳಪಡಿಸಿದ್ದಾರೆ. ಆದರೆ ಆತನಿಂದ ನಿಖರವಾದ ಮಾಹಿತಿ ಸಿಗುತ್ತಿಲ್ಲ ಎನ್ನಲಾಗಿದೆ. ಸುರೇಂದ್ರ ಬಾಬು ವಿಚಾರಣೆಗೆ ಸಹಕರಿಸುತ್ತಿಲ್ಲ ಎನ್ನುತ್ತವೆ ಮೂಲಗಳು.
ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಮಂಗಳವಾರ (ಅ.16) ಪೊಲೀಸರ ಕೈಸೇರುವ ಸಾಧ್ಯತೆಗಳಿವೆ. ಹೇಮಶ್ರೀ ಆಪ್ತಗೆಳೆಯ ಎನ್ನಲಾಗಿರುವ ಮಂಜುನಾಥನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆತನನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.
ಆಂಧ್ರಪದೇಶದ ಅನಂತಪುರದ ಫಾರ್ಮ್ ಹೌಸ್ ಮಾಲೀಕ ಮುರಳಿಯನ್ನೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೇಮಶ್ರೀ ಚಿತಾಭಸ್ಮ ವಿಸರ್ಜನೆಗಾಗಿ ವಾರಾಣಾಸಿಗೆ ಹೋಗಿದ್ದ ಅವರ ಪೋಷಕರು ಮಂಗಳವಾರ (ಅ.16) ಬೆಂಗಳೂರಿಗೆ ಹಿಂತಿರುಗುತ್ತಿದ್ದಾರೆ ಎಂಬ ಮಾಹಿತಿಯೂ ಇದೆ. (ಏಜೆನ್ಸೀಸ್)