Don't Miss!
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾದಿಂದ 'ಬಿಗ್ ಬಾಸ್' ಜಯಶ್ರೀ ಕಿಕ್ ಔಟ್: ನಿರ್ದೇಶಕರ ವಿರುದ್ಧ ಗರಂ.!
Recommended Video
'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ಮೇಲೆ ಜಯಶ್ರೀಗೆ ಸ್ಯಾಂಡಲ್ ವುಡ್ ಕೈಬೀಸಿ ಕರೆಯಿತು. ಇಮ್ರಾನ್ ಸರ್ದಾರಿಯಾ ನಿರ್ದೇಶನದ 'ಉಪ್ಪು ಹುಳಿ ಖಾರ' ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದ ಜಯಶ್ರೀ 'ನಟ ನಟಿಯರು' ಚಿತ್ರಕ್ಕೂ ಗ್ರೀನ್ ಸಿಗ್ನಲ್ ಕೊಟ್ಟಿದ್ದರು.
ಮಂಜು ಹೆಬ್ಬೂರು ನಿರ್ದೇಶನದ 'ನಟ ನಟಿಯರು' ಸಿನಿಮಾ ಚಿತ್ರೀಕರಣದಲ್ಲಿ ಜಯಶ್ರೀ ಪಾಲ್ಗೊಂಡಿದ್ದರು. ಎರಡು ದಿನ ಶೂಟಿಂಗ್ ಮುಗಿದದ್ದೂ ಆಯ್ತು. ಆದ್ರೆ, ಮೂರನೇ ದಿನ ಆಗಿದ್ದೇ ಬೇರೆ.
'ನಟ ನಟಿಯರು' ಸಿನಿಮಾದ ಚಿತ್ರೀಕರಣ ಮೂರನೇ ದಿನ ಎಲ್ಲಿ ನಡೆಯುತ್ತೆ ಎನ್ನುವ ಬಗ್ಗೆ ಜಯಶ್ರೀಗೆ ಮಾಹಿತಿ ಇರಲಿಲ್ಲ. ಇದಕ್ಕಿದ್ದಂತೆ 'ನಟ ನಟಿಯರು' ಸಿನಿಮಾದ ವಾಟ್ಸ್ ಆಪ್ ಗ್ರೂಪ್ ನಿಂದ ಜಯಶ್ರೀಯನ್ನ ಹೊರ ಹಾಕಲಾಯಿತು. ಜಯಶ್ರೀ ನಂಬರ್ ನ ನಿರ್ದೇಶಕ ಮಂಜು ಹೆಬ್ಬೂರ್ ಬ್ಲಾಕ್ ಮಾಡಿದರು.
'Rapid ಫೈರ್' ಪ್ರಶ್ನೆಗಳಿಗೆ ಬಿಗ್ ಬಾಸ್ ಜಯಶ್ರೀ ಕೊಟ್ಟ ನೇರ ಉತ್ತರ
ಸಮಸ್ಯೆ ಏನು ಎಂಬುದರ ಬಗ್ಗೆ ವಿವರಿಸದೆ, ಮಾಹಿತಿ ಕೂಡ ನೀಡದೆ ಏಕಾಏಕಿ ಸಿನಿಮಾದಿಂದ ಕಿಕ್ ಔಟ್ ಮಾಡಿರುವುದಕ್ಕೆ ನಿರ್ದೇಶಕ ಮಂಜು ಹೆಬ್ಬೂರ್ ವಿರುದ್ಧ ನಟಿ ಜಯಶ್ರೀ ಗರಂ ಆಗಿದ್ದಾರೆ.
ಅತ್ತ ನಿರ್ದೇಶಕರ ವಿರುದ್ಧ ಜಯಶ್ರೀ ಆರೋಪ ಮಾಡುತ್ತಿದ್ದಾರೆ. ಇತ್ತ ಮಂಜು ಹೆಬ್ಬೂರ್ ಫೋನ್ ಸ್ವಿಚ್ ಆಫ್ ಆಗಿದೆ. ಜಯಶ್ರೀ ರನ್ನ ಮಾತ್ರ ಚಿತ್ರದಿಂದ ಕಿತ್ತು ಹಾಕಲಾಗಿದ್ಯೋ, ಅಥವಾ ಸಿನಿಮಾದ ಚಿತ್ರೀಕರಣವೇ ನಿಂತು ಹೋಗಿದ್ಯೋ.. ಖಚಿತ ಆಗಿಲ್ಲ.