Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಹಾಯ ಮಾಡಿದರೂ ಟ್ರೋಲ್ ಆದ 'ವಜ್ರಕಾಯ' ನಟಿ ಕಾರುಣ್ಯಾ
ಕೊರೊನಾ ಸಂಕಷ್ಟಕ್ಕೆ ಸಿಲುಕಿರುವವರಿಗೆ ಕೆಲವು ಸ್ಯಾಂಡಲ್ವುಡ್ ನಟ-ನಟಿಯರು ಬೀದಿಗಿಳಿದು ಸಹಾಯ ಮಾಡುತ್ತಿದ್ದಾರೆ. ನಟಿ ಕಾರುಣ್ಯಾ ರಾಮ್ ಸಹ ಇದೇ ದಾರಿ ಅನುಸರಿಸಿದ್ದಾರೆ.
Recommended Video
ರಾಜಕಾರಣಿಗಳೊಂದಿಗೆ ಜೊತೆ ಸೇರಿ ಅವಶ್ಯಕತೆ ಇದ್ದವರಿಗೆ ದಿನಸಿ ಕಿಟ್, ತರಕಾರಿಗಳನ್ನು ವಿತರಿಸಿದ್ದಾರೆ. ಇಷ್ಟೆಲ್ಲಾ ಮಾಡಿದರೂ ಸಹ ನಟಿ ಕಾರುಣ್ಯಾ ನೆಟ್ಟಿಗರ ಕೈಲಿ ಟ್ರೋಲ್ ಆಗಿದ್ದಾರೆ.
ಹೌದು, ಹೀಗೆ ನೆಟ್ಟಿಗರ ಕೈಲಿ ಬುದ್ಧಿಹೇಳಿಸಿಕೊಳ್ಳುವುದಕ್ಕೆ ಕಾರಣ ಒಂದು ಫೋಟೊ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಫೊಟೊ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಜೊತೆ ಕಾರುಣ್ಯಾ ಫೊಟೊ
ಸಿದ್ದರಾಮಯ್ಯ ಅವರ ಪಕ್ಕದಲ್ಲಿ ನಿಂತು ಫೊಟೊ ತೆಗೆಸಿಕೊಂಡಿರುವ ಕಾರುಣ್ಯಾ ರಾಮ್, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಆದರೆ ಚಿತ್ರದಲ್ಲಿ ಸಿದ್ದರಾಮಯ್ಯ ಅವರು ಮಾಸ್ಕ್ ಹಾಕಿಕೊಂಡಿದ್ದರೆ, ಕಾರುಣ್ಯಾ ರಾಮ್ ಮಾಸ್ಕ್ ಧರಿಸಿಲ್ಲ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿರೆಂದು ಕಮೆಂಟ್
ಇದನ್ನು ಎತ್ತಿತೋರಿಸಿರುವ ಕೆಲವರು, ಕಮೆಂಟ್ನಲ್ಲಿ ನಟಿಗೆ ಪಾಠ ಮಾಡಿದ್ದಾರೆ. 'ಸಿದ್ದರಾಮಯ್ಯ ಅವರು ಮಾಸ್ಕ್ ಧರಿಸಿದ್ದಾರೆ, ನೀವೇಕೆ ಮಾಸ್ಕ್ ಧರಿಸಿಲ್ಲ' ಎಂದಿದ್ದಾರೆ. ಸಾಮಾಜಿಕ ಅಂತರ ಸಹ ಕಾಪಾಡಿಕೊಂಡಿಲ್ಲ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಂಎಲ್ಸಿ ನಾರಾಯಣಸ್ವಾಮಿ ಅವರೊಂದಿಗೆ ಕಿಟ್ ವಿತರಣೆ
ಇನ್ನು ದಿನಸಿ ಕಿಟ್ ವಿತರಿಸಿರುವ ಬಗ್ಗೆ ಬರೆದುಕೊಂಡಿರುವ ಕಾರುಣ್ಯಾ ರಾಮ್, ಎಂಎಲ್ಸಿ ನಾರಾಯಣ ಸ್ವಾಮಿ ಅವರು 10,000 ಮಂದಿಗೆ ದಿನಸಿ ಕಿಟ್ ವಿತರಿಸಿದ್ದಾರೆ, ಲಾಕ್ಡೌನ್ ಆರಂಭವಾದಾಗಿನಿಂದಲೂ ಆಹಾರದ ವ್ಯವಸ್ಥೆಯನ್ನು ದಿನವೂ ಮಾಡುತ್ತಿದ್ದಾರೆ. ಇವರ ಕೆಲಸ ಶ್ಲಾಘಿಸಲು ಸಿದ್ದರಾಮಯ್ಯ ಸಹ ಆಗಮಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ ಕಾರುಣ್ಯಾ ರಾಮ್.
ಹಲವು ಸಿನಿಮಾಗಳಲ್ಲಿ ನಟಿಸಿರುವ ಕಾರುಣ್ಯಾ
ನಟಿ ಕಾರುಣ್ಯಾ ರಾಮ್ ವಜ್ರಕಾಯ, ಕಿರಗೂರಿನ ಗಯ್ಯಾಳಿಗಳು, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಮನೆ ಮಾರಾಟಕ್ಕಿದೆ, ನರಸಿಂಹ ಸೇರಿ ಕೆಲವು ತಮಿಳು ಸಿನಿಮಾದಲ್ಲೂ ನಟಿಸಿದ್ದಾರೆ. ಬಿಗ್ಬಾಸ್ ಸೀಸನ್ 4 ನಲ್ಲೂ ಅವರು ಭಾಗವಹಿಸಿದ್ದರು.