Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಡ್ರೈವರ್ ಜೊತೆ ಹೀರೋಯಿನ್ ಪುತ್ರಿ ಎಸ್ಕೇಪ್
ಹೈದರಾಬಾದಿನಲ್ಲಿ ಎಂ.ಎಡ್ ಮಾಡುತ್ತಿರುವ ಮಾಧುರಿ ಕಾರು ಚಾಲಕನಾದ ಅಲಕಾಪಲ್ಲಿ ರಾಜ್ ಕುಮಾರ್ (28) ಎಂಬುವವರನ್ನು ಮನಸಾರೆ ಪ್ರೀತಿಸುತ್ತಿದ್ದರು. ಅದ್ಯಾವ ಘಳಿಗೆಯಲ್ಲಿ ಇವರಿಬ್ಬರ ನಡುವೆ ಪ್ರೇಮಾಂಕುರವಾಯಿತೋ ಏನೋ ಗೊತ್ತ್ತಿಲ್ಲ.
ಸಿಕಿಂದ್ರಾಬಾದ್ ನಲ್ಲಿ ರಾಜ್ ಕುಮಾರ್ ಖಾಸಗಿ ಕಂಪನಿಯೊಂದರಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಇವರಿಬ್ಬರೂ ಒಬ್ಬರನ್ನೊಬ್ಬರು ಗುಟ್ಟಾಗಿ, ಗಾಢವಾಗಿ ಪ್ರೀತಿಸಿಕೊಳ್ಳುತ್ತಿದ್ದರು.
ಅದು ಹೇಗೋ ಏನೋ ಈ ವಿಷಯ ಹುಡುಗಿ ತಾಯಿ ಕಿವಿಗೆ ಬಿದ್ದಿದೆ. ಇವರಿಬ್ಬರ ಮದುವೆಗೆ ಕವಿತಾ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಮದುವೆ ಬಗ್ಗೆ ಗಲಾಟೆಯೋ ಆಗಿದೆ. ಎರಡು ದಿನಗಳ ಹಿಂದಷ್ಟೇ ಮಾಧುರಿ ಮನೆಯಿಂದ ಓಡಿಹೋಗಿದ್ದಾರೆ.
ಕರೀಂನಗರದ ಪೆದ್ದಪಲ್ಲಿ ದೇವಸ್ಥಾನದಲ್ಲಿ ಮಾಧುರಿ ಹಾಗೂ ರಾಜ್ ಕುಮಾರ್ ಮದುವೆಯಾಗಿದ್ದಾರೆ. ದಲಿತ ಮುಖಂಡರೊಬ್ಬರ ಸಮ್ಮುಖದಲ್ಲಿ ಇವರಿಬ್ಬರೂ ಒಂದಾಗಿದ್ದಾರೆ. ಆದರೆ ಮಾಧುರಿ ಅವರ ತಾಯಿ ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಪಂಜಾಗುಟ್ಟ ಪೊಲೀಸರಿಗೆ ದೂರು ನೀಡಿದ್ದಾರೆ.
ಪೊಲೀಸರು ರಾಜ್ ಕುಮಾರ್ ಹಾಗೂ ದಲಿತ ಮುಖಂಡರನ್ನು ಬಂಧಿಸಿ ಹೈದರಾಬಾದಿಗೆ ಕರೆತಂದಿದ್ದಾರೆ. ಈಗ ಮಾಧುರಿ ಮತ್ತು ರಾಜ್ ಕುಮಾರ್ ಅವರನ್ನು ಒಂದು ಮಾಡಬೇಕು ಎಂದು ಕೆಲವು ದಲಿತ ಸಂಘಟನೆಗಳು ಪ್ರಯತ್ನಿಸುತ್ತಿವೆ.
ಪೋಷಕ ನಟಿಯಾಗಿ ಕವಿತಾ ಹಲವಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತೆಲುಗು ದೇಶಂ ಪಕ್ಷದ ಕಾರ್ಯಕರ್ತೆಯಾಗಿಯೂ ಗುರುತಿಸಿಕೊಂಡಿದ್ದಾರೆ. ಆದರೆ ಮಾಧುರಿ ಮಾತ್ರ ತಮ್ಮ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ತಾವು ಪ್ರೇಮ ವಿವಾಹ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.