Don't Miss!
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಪಕ್ಷ ಬಿಟ್ಟು ಹೊರನಡೆದ ನಟಿ ಖುಷ್ಬೂ ಸುಂದರ್?
ತಮಿಳು ನಟಿ ಖುಷ್ಬೂ ರಾಜಕೀಯ ಜರ್ನಿಯಲ್ಲಿ ಮತ್ತೆ ಬದಲಾವಣೆಯ ಗಾಳಿ ಬೀಸಿದೆ. ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ನಟಿ ಖುಷ್ಬೂ ನಂತರ ಕಾಂಗ್ರೆಸ್ ಪಕ್ಷ ಸೇರಿದ್ದರು. ಈಗ ಈಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
Recommended Video
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆಯಾಗಿದ್ದ ಖುಷ್ಬೂ ಅವರನ್ನು ಆ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ. ಹಾಗಾಗಿ, ಕಾಂಗ್ರೆಸ್ಗೆ ಖುಷ್ಬೂ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ.
ವಕ್ತಾರ ಸ್ಥಾನದಿಂದ ಖುಷ್ಬೂ ತೆಗೆದು ಹಾಕಿದ ಕಾಂಗ್ರೆಸ್!
2010ರಲ್ಲಿ ಡಿಎಂಕೆ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಖುಷ್ಬೂ ನಾಲ್ಕು ವರ್ಷಗಳ ನಂತರ ಡಿಎಂಕೆಗೆ ಬಿಟ್ಟು ಹೊರ ನಡೆದರು. ಆಮೇಲೆ 2014ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.
ಅಲ್ಲಿಂದ ಕಾಂಗ್ರೆಸ್ ಕಟ್ಟಾಳು ಆಗಿ ಖುಷ್ಬೂ ರಾಜಕಾರಣ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಖುಷ್ಬೂ ಟಿಕೆಟ್ ಆಕಾಂಕ್ಷಿ ಸಹ ಆಗಿದ್ದರು. ಆದ್ರೆ, ಡಿಎಂಕೆ ಜೊತೆಗಿನ ಮೈತ್ರಿ ಹಿನ್ನೆಲೆ ಟಿಕೆಟ್ ಕೈ ತಪ್ಪಿತ್ತು. ರಾಜ್ಯಸಭೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಅದು ನಿರಾಸೆ ಆಯಿತು.
ಈಗ, ಕಾಂಗ್ರೆಸ್ ಪಕ್ಷದಿಂದಲೂ ಖುಷ್ಬೂ ಹೊರ ಬಂದಿದ್ದಾರೆ ಎನ್ನಲಾಗಿದೆ. ಕೈ ಪಕ್ಷಕ್ಕೆ ರಾಜೀನಾಮೆ ನೀಡಿರುವ ಖುಷ್ಬೂ ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದ್ರೆ, ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.