Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವಿ ಬೆಳಗೆರೆ ನಿಧನ ಸುದ್ದಿ ಕೇಳಿ ಕಣ್ಣೀರಿಟ್ಟ ಹಿರಿಯ ನಟಿ ಲೀಲಾವತಿ
ಹಿರಿಯ ಪ್ರತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಪತ್ರಿಕೋದ್ಯಮ ಹಾಗೂ ಸಿನಿಮಾ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ರವಿ ಬೆಳಗೆರೆ ಜೊತೆ ಬಹಳ ಆತ್ಮೀಯ ಬಾಂಧವ್ಯ ಹೊಂದಿದವರು ತಮ್ಮ ಹಳೆಯ ನೆನಪುಗಳನ್ನು ಹೇಳಿಕೊಂಡು ಕಣ್ಣೀರು ಹಾಕಿದ್ದಾರೆ.
Recommended Video
ರವಿ ನಿಧನದಿಂದ ತೀವ್ರ ಆಘಾತಕ್ಕೆ ಒಳಗಾಗಿರುವ ಹಿರಿಯ ನಟಿ ಲೀಲಾವತಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ''ಪ್ರೀತಿಯಿಂದ ಅಮ್ಮಾ ಎಂದು ಕರೆಯುತ್ತಿದ್ದ, ರವಿ ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ'' ಎಂದು ಕಣ್ಣೀರು ಸುರಿಸಿದ್ದಾರೆ.
ಲೀಲಾವತಿ ಆತ್ಮಕಥನ 'ರಾಜ್ ಲೀಲಾ ವಿನೋದ'ದಲ್ಲಿ ಅಂಥಾದ್ದೇನಿದೆ?
''ಸಾವಿರಾರು ಜನರ ಸಾಕ್ಷಿಯಾಗಿ ವೇದಿಕೆಯಲ್ಲಿ ಪ್ರೀತಿಯಿಂದ ಅಮ್ಮಾ ಎಂದು ಕರೆದಿದ್ದರು. ಯಾವಾಗಲೂ ಅಮ್ಮ ಎಂದೇ ಕರೆಯುತ್ತಿದ್ದರು. ಆ ದೇವರು ರವಿ ಆತ್ಮಕ್ಕೆ ಶಾಂತಿ ನೀಡಲಿ. ಸದಾ ಬೆಳಗುತ್ತಿರಲಿ'' ಎಂದು ಖಾಸಗಿ ಸುದ್ದಿ ವಾಹಿನಿ ಜೊತೆ ಮಾತನಾಡಿದ್ದಾರೆ.
ಅಂದ್ಹಾಗೆ, ಲೀಲಾವತಿ ಅವರ ಜೊತೆ ರವಿ ಬೆಳಗೆರೆ ಉತ್ತಮ ಒಡನಾಟ ಹೊಂದಿದ್ದರು. ಹಿರಿಯ ನಟಿ ಜೀವನ ಕುರಿತು 'ರಾಜ್ ಲೀಲಾ ವಿನೋದ' ಎಂಬ ಪುಸ್ತಕ ಬರೆದಿದ್ದರು.
ಲೀಲಾವತಿ ಅವರ ವೈಯಕ್ತಿಕ ಬದುಕಿನಲ್ಲಿ ನಡೆದ ಘಟನೆಗಳನ್ನು ಸಾರ್ವಜನಿಕ ಜಗತ್ತಿಗೆ ಪರಿಚಯ ಮಾಡಿದ ಖ್ಯಾತಿ ಬೆಳಗೆರೆ ಅವರಿಗೆ ಸಲ್ಲುತ್ತದೆ. ವರ್ಷಗಳ ಕಾಲ ತಮ್ಮ ಮನಸ್ಸಿನಲ್ಲಿ ಹಿಡಿದಿಟ್ಟುಕೊಂಡಿದ್ದ ಅದೇಷ್ಟೋ ನೋವುಗಳನ್ನು ಬೆಳಗೆರೆ ಮುಂದೆ ಲೀಲಾವತಿ ಅವರು ಹೇಳಿಕೊಂಡಿದ್ದರು.