Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಭೇಟಿ ಮಾಡಿದ ಲೀಲಾವತಿ ಮತ್ತು ವಿನೋದ್ ರಾಜ್
Recommended Video
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ನಿನ್ನೆ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.
ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅವರ ಪರವಾಗಿ ಲೀಲಾವತಿ ಭೇಟಿ ನೀಡಿ ಮನವಿ ಮಾಡಿದ್ದಾರೆ.
ಕಷ್ಟದಲ್ಲಿದ್ದ ನಟಿ ಲೀಲಾವತಿಗೆ ಕರುಣಾನಿಧಿ 'ಮಹಾನ್' ವ್ಯಕ್ತಿಯಾಗಿದ್ದೇಕೆ.?
ಸುಮಾರು 80 ವರ್ಷಗಳಿಂದ ಅಲ್ಲಿನ ಜನ ಜೀವನ ಮಾಡ್ತಿದ್ದಾರೆ. ಎಲ್ಲರ ಮನೆಗೂ ಪಾಣಿ ಮಾಡಿಸಿದ್ದಾರೆ. ಜೊತೆಗೆ ದಿನನಿತ್ಯ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
'ನಾಗರಹಾವು' ಸಿನಿಮಾ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ
ಹಿರಿಯ ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. pic.twitter.com/Z5JnSgbaHt
— CM of Karnataka (@CMofKarnataka) November 17, 2018
ಲೀಲಾವತಿ ಅವರ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಈ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥ ಪಡಿಸುವ ಭರವಸೆ ನೀಡಿದ್ದಾರಂತೆ. ಈ ವೇಳೆ ಲೀಲಾವತಿ ಅವರ ಮಗ ನಟ ವಿನೋದ್ ರಾಜ್ ಕೂಡ ಸಾಥ್ ನೀಡಿದರು.