Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಭೇಟಿ ಮಾಡಿದ ಲೀಲಾವತಿ ಮತ್ತು ವಿನೋದ್ ರಾಜ್
Recommended Video
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನ ಹಿರಿಯ ನಟಿ ಲೀಲಾವತಿ ಭೇಟಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನ ನಿನ್ನೆ ಭೇಟಿ ಮಾಡಿದ ಲೀಲಾವತಿ ಅವರು ಸೋಲದೇವನಹಳ್ಳಿ ಗ್ರಾಮವನ್ನ ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಕೈಬಿಡಿ ಎಂದು ಮನವಿ ಮಾಡಿದ್ದಾರೆ.
ಸೋಲದೇವನಹಳ್ಳಿ ಗ್ರಾಮ ಸುತ್ತಾಮುತ್ತ ಸುಮಾರು 900 ಎಕರೆ ಪ್ರದೇಶ ಅರಣ್ಯವೆಂದು ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಈ ಘೋಷಣೆಯಿಂದ 650ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ, ಅಲ್ಲಿನ ಕುಟುಂಬಗಳ ರಕ್ಷಣೆ ಮಾಡಬೇಕು ಎಂದು ಅವರ ಪರವಾಗಿ ಲೀಲಾವತಿ ಭೇಟಿ ನೀಡಿ ಮನವಿ ಮಾಡಿದ್ದಾರೆ.
ಕಷ್ಟದಲ್ಲಿದ್ದ ನಟಿ ಲೀಲಾವತಿಗೆ ಕರುಣಾನಿಧಿ 'ಮಹಾನ್' ವ್ಯಕ್ತಿಯಾಗಿದ್ದೇಕೆ.?
ಸುಮಾರು 80 ವರ್ಷಗಳಿಂದ ಅಲ್ಲಿನ ಜನ ಜೀವನ ಮಾಡ್ತಿದ್ದಾರೆ. ಎಲ್ಲರ ಮನೆಗೂ ಪಾಣಿ ಮಾಡಿಸಿದ್ದಾರೆ. ಜೊತೆಗೆ ದಿನನಿತ್ಯ ಕಾಡು ಪ್ರಾಣಿಗಳಿಂದ ತೊಂದರೆಯಾಗುತ್ತಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
'ನಾಗರಹಾವು' ಸಿನಿಮಾ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ
ಹಿರಿಯ ನಟಿ ಲೀಲಾವತಿ ಹಾಗೂ ವಿನೋದ್ ರಾಜ್ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. pic.twitter.com/Z5JnSgbaHt
— CM of Karnataka (@CMofKarnataka) November 17, 2018
ಲೀಲಾವತಿ ಅವರ ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ಈ ಬಗ್ಗೆ ಸೋಮವಾರ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥ ಪಡಿಸುವ ಭರವಸೆ ನೀಡಿದ್ದಾರಂತೆ. ಈ ವೇಳೆ ಲೀಲಾವತಿ ಅವರ ಮಗ ನಟ ವಿನೋದ್ ರಾಜ್ ಕೂಡ ಸಾಥ್ ನೀಡಿದರು.