Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪರೂಪದ ಫೋಟೊಗಳ ನೆನಪನ್ನು ಹಂಚಿಕೊಂಡ ಮಾಲಾಶ್ರೀ
ತಮಿಳುನಾಡಿನಲ್ಲಿ ಹುಟ್ಟಿ, ತೆಲುಗು ಚಿತ್ರರಂಗದಲ್ಲಿ ಛಾಪು ಮೂಡಿಸಿ ಕೊನೆಗೆ ಕನ್ನಡತಿಯಾಗಿ ಗುರುತಿಸಿಕೊಂಡವರು ನಟಿ ಮಾಲಾಶ್ರೀ. ಕನಸಿನ ರಾಣಿ ಎಂದೇ ಖ್ಯಾತರಾದ ಮಾಲಾಶ್ರೀ, ಅಭಿನಯಿಸಿದ ಚಿತ್ರವೆಂದರೆ ಗೆದ್ದೇ ಗೆಲ್ಲುತ್ತದೆ ಎಂಬ ಮಾತು ಪ್ರಚಲಿತದಲ್ಲಿತ್ತು. ಕನ್ನಡ ಚಿತ್ರರಂಗದಲ್ಲಿ ಹೀರೋಯಿನ್ ಕ್ರೇಜ್ ಹುಟ್ಟಿಸಿದವರೆಂದರೆ ಅದು ಮಾಲಾಶ್ರೀ. ತಮ್ಮದೇ ದೊಡ್ಡ ಅಭಿಮಾನಿ ವರ್ಗವನ್ನು ಸೃಷ್ಟಿಸಿಕೊಂಡಿದ್ದ ಅವರು, ಚಿತ್ರರಂಗವನ್ನು ಆಳಿದ ಕೆಲವೇ ನಟಿಯರಲ್ಲಿ ಒಬ್ಬರು.
1979ರಲ್ಲಿ ಬಾಲನಟಿಯಾಗಿ ತಮಿಳು ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಅವರು ತಮಿಳು ಮತ್ತು ತೆಲುಗಿನಲ್ಲಿ ಸುಮಾರು 34 ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದಾರೆ. ಅದರಲ್ಲಿ 26 ಚಿತ್ರಗಳಲ್ಲಿ ಹುಡುಗನ ಪಾತ್ರಗಳಲ್ಲಿಯೇ ನಟಿಸಿದ್ದರು ಎನ್ನುವುದು ವಿಶೇಷ. ಶ್ರೀದುರ್ಗಾ ಎಂಬ ಹೆಸರಿನ ಅವರು 'ಮಾಲಾಶ್ರೀ'ಯಾಗಿ ಬದಲಾಗಿದ್ದು, 'ನಂಜುಂಡಿ ಕಲ್ಯಾಣ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವೇಳೆ. 1998ರ ಬಳಿಕ ಮಾಲಾಶ್ರೀ ಸಿನಿಮಾಗಳು ನಟಿಸುವುದು ಕಡಿಮೆಯಾದರೂ ಈಗಲೂ ಅಭಿಮಾನಿಗಳನ್ನು ಉಳಿಸಿಕೊಂಡಿದ್ದಾರೆ.
ಸೀಮಂತದ ಸಂಭ್ರಮದ ಮೆಲುಕು
ಎರಡು ಮಕ್ಕಳ ತಾಯಿಯಾಗಿರುವ ಮಾಲಾಶ್ರೀ, ತಮ್ಮ ಮೊದಲ ಮಗುವಿನ ಸೀಮಂತದ ಸಂದರ್ಭದ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. 2001ರಲ್ಲಿ ಮಾಲಾಶ್ರೀ ಅವರ ಮಗಳು ಅನನ್ಯಾ ಜನಿಸಿದ್ದರು. ಅದಕ್ಕೂ ಮುನ್ನ ನಡೆದಿದ್ದ ಸೀಮಂತ ಶಾಸ್ತ್ರದಲ್ಲಿ ಪತಿ ರಾಮು ಅವರ ಜತೆಗಿನ ಅಪರೂಪದ ಚಿತ್ರಗಳನ್ನು ಅವರು ಅಭಿಮಾನಿಗಳ ಮುಂದೆ ಹಂಚಿಕೊಂಡಿದ್ದಾರೆ.
ಮಾಲಾಶ್ರೀ ಅಭಿನಯದ ಈ ಚಿತ್ರ ಕಂಡು ಬೆಚ್ಚಿಬಿದ್ದಿತ್ತು ತೆಲುಗು ಚಿತ್ರರಂಗ
ರಾಮಾಚಾರಿಯ ನಂದಿನಿ ನೆನಪು
ಈ ಫೋಟೊಗಳನ್ನು ಕಂಡು ಅಭಿಮಾನಿಗಳು ಖುಷಿಯಿಂದ ತಮ್ಮ ಅನಿಸಿಕೆಗಳನ್ನು ತಿಳಿಸಿದ್ದಾರೆ. 'ರಾಮಾಚಾರಿ' ಚಿತ್ರದಲ್ಲಿ 'ನಂದಿನಿ' ಪಾತ್ರವೇ ನೆನಪಿಗೆ ಬರುವಂತಿದೆ ಎಂದು ಅನೇಕರು ಹೇಳಿದ್ದಾರೆ. ಅಮ್ಮನಾಗುವ ಆ ಮಧುರ ಕ್ಷಣಗಳು ವಿಶೇಷ ಪುಳಕ ನೀಡುತ್ತದೆ. ಅದು ಸ್ವರ್ಗ ಸುಖ ಎಂದು ಕೆಲವರು ಮಾಲಾಶ್ರೀ ನೆನಪುಗಳ ಜತೆ ತಮ್ಮ ನೆನಪುಗಳನ್ನು ಜೋಡಿಸಿದ್ದಾರೆ.
ಮಾಲಾಶ್ರೀ
ಆಗಸ್ಟ್ 10ರಂದು ಮಾಲಾಶ್ರೀ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ವಯಸ್ಸಿನಲ್ಲಿಯೂ ಅವರ ಸಿನಿಮಾ ಉತ್ಸಾಹ ಮತ್ತು ಸಾಮರ್ಥ್ಯ ಕುಂದಿಲ್ಲ. ಹಾಗೆಯೇ ಅಭಿಮಾನಿಗಳ ಬೇಡಿಕೆಯೂ ಕಡಿಮೆಯಾಗಿಲ್ಲ. ಮುಂದಿನ ಸಿನಿಮಾ ಯಾವಾಗ ಎಂದು ಕೇಳುತ್ತಿರುತ್ತಾರೆ. ಇತ್ತೀಚೆಗೆ ಸ್ನೇಹಿತರ ದಿನಾಚರಣೆಯ ದಿನ ಮಾಲಾಶ್ರೀ, ಶುಭಕೋರುವಾಗ ಹಂಚಿಕೊಂಡಿದ್ದು ತಮ್ಮ ಅಭಿಮಾನಿಗಳ ಜತೆಗಿನ ಚಿತ್ರವನ್ನು.
ರಶ್ಮಿಕಾ ಮಂದಣ್ಣ ಬಗ್ಗೆ ನಟಿ ಮಾಲಾಶ್ರೀ ಮೆಚ್ಚುಗೆ
ರಾಜ್ಯ ಪ್ರಶಸ್ತಿ
ಮಾಲಶ್ರೀ ಕಡೆಯದಾಗಿ ತೆರೆಯ ಮೇಲೆ ಕಾಣಿಸಿಕೊಂಡಿದ್ದು 'ಉಪ್ಪು ಹುಳಿ ಖಾರ' ಚಿತ್ರದಲ್ಲಿ. 1989ರಿಂದ ನಾಯಕಿಯಾಗಿ ಕನ್ನಡ ಮತ್ತು ತೆಲುಗಿನಲ್ಲಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರೂ ಮಾಲಾಶ್ರೀ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ ನೀಡುವ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದ್ದು 2015ರ 'ಗಂಗಾ' ಚಿತ್ರದ ಅಭಿನಯಕ್ಕಾಗಿ. ಅಂದರೆ ನಾಯಕಿಯಾಗಿ ಗುರುತಿಸಿಕೊಂಡ 26 ವರ್ಷಗಳ ಬಳಿಕ. 1995ರಲ್ಲಿ ಗಡಿಬಿಡಿ ಅಳಿಯ ಚಿತ್ರ ನಿರ್ದೇಶಿಸಿದ್ದ ಸಾಯಿ ಪ್ರಕಾಶ್ ಜತೆ, 19 ವರ್ಷಗಳ ನಂತರ ಮಾಲಾಶ್ರೀ ಸಿನಿಮಾ ಮಾಡಿದ್ದರು.
ವಿಶೇಷ ವ್ಯಕ್ತಿಗಳಿಗೆ ಸ್ಪೆಷಲ್ ಥ್ಯಾಂಕ್ಸ್ ಹೇಳಿದ 'ಕನಸಿನ ರಾಣಿ', ಯಾಕೆ?