Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಲೇಡಿ ಟೈಗರ್' ಮಾಲಾಶ್ರೀ ಅವರ ಮುಂದಿನ ಪ್ರಾಜೆಕ್ಟ್ ಯಾವುದು?
'ಲೇಡಿ ಟೈಗರ್', 'ರಣಚಂಡಿ', 'ಚಂಡಿ-ಚಾಮುಂಡಿ', 'ಕನ್ನಡದ ಕಿರಣ್ ಬೇಡಿ' ಅಂತೆಲ್ಲಾ ಹೆಸರುಗಳಿಂದ ಕರೆಯಲ್ಪಡುವ ನಟಿ ಮಾಲಾಶ್ರೀ ಅವರು 'ಗಂಗಾ' ಚಿತ್ರದ ನಂತರ ಗಾಂಧಿನಗರದಿಂದ ನಾಪತ್ತೆಯಾಗಿದ್ದರು.
ತದನಂತರ ಯಾವುದೇ ಪ್ರಾಜೆಕ್ಟ್ ಗಳಲ್ಲಿ ಕೈ ಜೋಡಿಸದ ಮಾಲಾಶ್ರೀ ಅವರು ಇದೀಗ ಬಹು ತಾರಾಗಣ ಇರುವ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೌದು ನಿರ್ದೇಶಕ ಗುರು ದೇಶಪಾಂಡೆ ಅವರ 'ಜೋನ್ ಜಾನಿ ಜನಾರ್ಧನ' ಎಂಬ ಸಿನಿಮಾದಲ್ಲಿ ಮಾಲಾಶ್ರಿ ಮಿಂಚಲಿದ್ದಾರೆ.[ಕನ್ನಡ ಚಿತ್ರರಂಗದ ಲೇಡಿ ಟೈಗರ್ ಮಾಲಾಶ್ರೀ ಈಗೇನ್ಮಾಡ್ತಿದ್ದಾರೆ]
ಎಮ್.ಆರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ 'ಜೋನ್ ಜಾನಿ ಜನಾರ್ಧನ್' ಚಿತ್ರ ನಿರ್ದೇಶಕ ನಾದಿರ್ ಷಾ ಆಕ್ಷನ್-ಕಟ್ ಹೇಳಿದ್ದ ಮಲಯಾಳಂ ಚಿತ್ರ 'ಅಮರ್ ಅಕ್ಬರ್ ಆಂಟನಿ' ಚಿತ್ರದ ರೀಮೆಕ್ ಆಗಿದೆ.
'ಜೋನ್ ಜಾನಿ ಜನಾರ್ಧನ' ಚಿತ್ರದಲ್ಲಿ ನಟ ಅಜೇಯ್ ರಾವ್, ಲೂಸ್ ಮಾದ ಯೋಗೇಶ್ ಮತ್ತು ನಟ ಕೃಷ್ಣ ಅಲಿಯಾಸ್ ಸುನೀಲ್ ನಾಗಪ್ಪ ಅವರು ಮಿಂಚುತ್ತಿದ್ದು, ಇವರ ಜೊತೆ ಮಾಲಾಶ್ರೀ ಅವರು ವಿಭಿನ್ನ ಪಾತ್ರದಲ್ಲಿ ಮಿಂಚಲಿದ್ದಾರೆ.[ಆಟೋ ಡ್ರೈವರ್ ಆಗಿ ಮಿಂಚಲಿರುವ ಲೇಡಿ ಟೈಗರ್]
ಈಗಾಗಲೇ ಮಲಯಾಳಂ ಚಿತ್ರದ ರೀಮೆಕ್ ಹಕ್ಕು ಖರೀದಿ ಮಾಡಿರುವ ನಿರ್ದೇಶಕ ಗುರು ದೇಶಪಾಂಡೆ ಅವರು ಮೇ ತಿಂಗಳಿನಲ್ಲಿ ಶೂಟಿಂಗ್ ಆರಂಭಿಸಲು ನಿರ್ಧರಿಸಿದ್ದಾರೆ. ಚಿತ್ರದ ಮೂವರು ನಾಯಕರಿಗೆ ನಾಯಕಿಯರ ಹುಡುಕಾಟದಲ್ಲೂ ನಿರ್ದೇಶಕರು ಬ್ಯುಸಿಯಾಗಿದ್ದಾರೆ.
ಸದಾ ವಿಭಿನ್ನ ಪಾತ್ರಗಳ ಮೂಲಕ ತೆರೆಯ ಮೇಲೆ ಮಿಂಚುವ ಮಾಲಾಶ್ರೀ ಈ ಚಿತ್ರದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಅನ್ನೋದು ಕೆಲವೇ ದಿನಗಳಲ್ಲಿ ತಿಳಿಯಲಿದೆ.