Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುಲ್ವಾಮಾ ಹುತಾತ್ಮರಿಗೆ ಗೌರವ ಸಲ್ಲಿಸಲು ಮಾನ್ವಿತಾ ಸ್ಪೆಷಲ್ ಸಾಂಗ್
Recommended Video
ನಟಿ ಮಾನ್ವಿತಾ ಕಾಮತ್ ಈಗ ಏನ್ಮಡ್ತಿದ್ದಾರೆ ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಯಾಕಂದ್ರೆ 'ಟಗರು' ನಂತರ ಮಾನ್ವಿತಾ ಅಷ್ಟಾಗಿ ಅಭಿಮಾನಿಗಳ ಮುಂದೆ ಕಾಣಿಸಿಕೊಂಡಿಲ್ಲ. ಆದ್ರೆ ಸಾಕಷ್ಟು ಚಿತ್ರಗಳಲ್ಲಿ ಮಾನ್ವಿತಾ ಬ್ಯುಸಿಯಾಗಿದ್ದಾರೆ.
ಇದರ ನಡುವೆ ಟಗರು ಪುಟ್ಟಿ ಈಗ ಮತ್ತೊಂದು ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಹೌದು, ಮಾನ್ವಿತಾ ಸದ್ದಿಲ್ಲದೆ ಬಾಲಿವುಡ್ ಗೆ ಹಾರಿದ್ದಾರೆ. ಹಾಗಂದ ಮಾತ್ರಕ್ಕೆ ಬಾಲಿವುಡ್ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಅಂದ್ಕೋಬೇಡಿ. ಯಾಕಂದ್ರೆ ಮಾನ್ವಿತಾ ಹಿಂದಿಯ ಆಲ್ಬಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಸಾಧುಕೋಕಿಲರನ್ನ ಹುಡುಕಿ ಬಿಟ್ಟರು ನಾಗತಿಹಳ್ಳಿ ಚಂದ್ರಶೇಖರ್
ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಮಾನ್ವಿತಾ ಬಾಲಿವುಡ್ ಗಾಳಿ ಸೇವಿಸಿ ಬಂದಿದ್ದಾರೆ. ಅಂದ್ಹಾಗೆ ಕನ್ನಡ ಮಾರಾಠಿ ಸಿನಿಮಾಗಳಲ್ಲಿ ಬ್ಯುಸಿ ಇರುವ ಟಗರು ಪುಟ್ಟಿ ಈ ಗ್ಯಾಪಲ್ಲಿ ಆಲ್ಬಂ ಸಾಂಗ್ ಯಾವಾಗ ಮಾಡಿದ್ರು? ಏನಿದರ ವಿಶೇಷ ಅಂತೀರಾ? ಮುಂದೆ ಓದಿ..
ಹಿಂದಿ ಆಲ್ಬಂ ಸಾಂಗ್ ನಲ್ಲಿ ಮಾನ್ವಿತಾ
ಮಾನ್ವಿತಾ ಮೊದಲ ಬಾರಿಗೆ ಆಲ್ಬಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಮಾನ್ವಿತಾ ಜೊತೆ ನಾಯಕನಾಗಿ ಬಾಲಿವುಡ್ ನಟ ಕೃಷ್ಣ ಅಭಿಷೇಕ್ ಕಾಣಿಸಿಕೊಂಡಿದ್ದಾರೆ. ಈ ಹಾಡಿಗೆ ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರಂತೆ. ಗಣೇಶ್ ಆಚಾರ್ಯ ಮಾನ್ವಿತಾ ಅವರ ನೆಚ್ಚಿನ ಡ್ಯಾನ್ಸರ್ ಅಂತೆ. ಹಾಗಾಗಿ ಅವರೇ ನೃತ್ಯ ನಿರ್ದೇಶನ ಮಾಡಿರುವುದು ಮಾನ್ವಿತಾ ಅವರಿಗೆ ಸಂತಸ ತಂದಿದೆಯಂತೆ.
ಕನಸಿನ ಕನಸು ಕತೆಗೆ ಟೈಟಲ್ ಹುಡುಕುತ್ತಿರುವ ನಾಗತಿಹಳ್ಳಿ
ಯೋಧರಿಗೆ ಹಾಡನ್ನು ಅರ್ಪಿಸಿದ ಮಾನ್ವಿತಾ
ಈ ಹಾಡು ಯೋಧರ ಬಗ್ಗೆ ಇರು ಹಾಡಾಗಿದೆಯಂತೆ. ಇಲ್ಲಿ ಮಾನ್ವಿತಾ ಯೋಧನ ಪತ್ನಿಯಾಗಿ ಕಾಣಿಸಿಕೊಂಡಿದ್ದಾರೆ. ಪತಿಯ ಪಾತ್ರದಲ್ಲಿ ಕೃಷ್ಣ ಅಭಿಷೇಕ್ ಮಿಂಚಿದ್ದಾರೆ. ಯುದ್ಧಕ್ಕೆ ಹೋದ ಪತಿ ಮರಳಿ ಬರುವುದನ್ನೆ ಕಾಯುತ್ತಿರುವುದನ್ನು ಈ ಹಾಡಿನ ಮೂಲಕ ಕಟ್ಟಿಕೊಡಲಾಗಿದೆಯಂತೆ. ಈ ಹಾಡನ್ನು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ಮಾಡಲಾಗಿದೆ.
ಸಧ್ಯದಲ್ಲೇ ರಿಲೀಸ್ ಆಗಲಿದೆ ಹಾಡು
ಮೊದಲ ಬಾರಿಗೆ ಹಿಂದಿಯ ಹಾಡೊಂದಕ್ಕೆ ಹೆಜ್ಜೆ ಹಾಕಿರುವ ಮಾನ್ವಿತಾ ಅವರನ್ನ ನೋಡಲು ಅಭಿಮಾನಿಗಳು ಕಾತುರರಾಗಿದ್ದಾರೆ. ಬಾಲಿವುಡ್ ಘಟಾನುಘಟಿ ನಾಯಕರಿಗೆ ನೃತ್ಯ ನಿರ್ದೇಶನ ಮಾಡಿರುವ ಗಣೇಶ ಅಚಾರ್ಯ ಅವರ ನೃತ್ಯ ನಿರ್ದೇಶನ ಈ ಹಾಡಿಗೆ ಇದೆ ಅಂದ್ಮೇಲೆ ಹಾಡಿನ ಮೇಲೆ ಕುತೂಹಲ ಕೊಂಚ ಹೆಚ್ಚಾಗಿದೆ. ಸದ್ಯ ಇಂಟ್ರಸ್ಟಿಂಗ್ ಮಾಹಿತಿ ರಿವೀಲ್ ಮಾಡಿರುವ ಮಾನ್ವಿತಾ ಸಧ್ಯದಲ್ಲೇ ಹಾಡಿನ ಮೂಲಕ ಎಂಟ್ರಿ ಕೊಡಲಿದ್ದಾರೆ.
'ರಾಜಸ್ಥಾನ್ ಡೈರಿ' ಹುಡುಕುತ್ತಾ ಮರಾಠಿ ಇಂಡಸ್ಟ್ರಿಗೆ ಹೊರಟ ಮಾನ್ವಿತಾ
ಮಾನ್ವಿತಾ ಬಳಿ ಇವೆ ಕೈತುಂಬ ಸಿನಿಮಾಗಳು
ಮಾನ್ವಿತಾ ಸದ್ಯ ಕನ್ನಡದಲ್ಲಿ ದಾರಿ ತಪ್ಪಿದ ಮಗ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸ್ಯಾಂಡಲ್ ವುಡ್ ಜೊತೆಗೆ ಮರಾಠಿ ಚಿತ್ರರಂಗಕ್ಕೂ ಕಾಲಿಟಿದ್ದಾರೆ. ಈ ಹಾಡಿನ ಮೂಲಕ ಈಗ ಬಾಲಿವುಡ್ ಗೆ ಕಾಲಿಡುವ ಸೂಚನೆ ಕೂಡ ನೀಡಿದ್ದಾರೆ. ಇದರ ಜೊತೆಗೆ ಚಿತ್ರಕಥೆ ಕೂಡ ಬರೆಯುತ್ತಿದ್ದಾರೆ. ಒಟ್ನಲ್ಲಿ ಸಾಕಷ್ಟು ಬ್ಯುಸಿಯಾಗಿರುವ ಮಾನ್ವಿತಾ ಈಗ ಆಲ್ಬಂ ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ.