Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಂತ ಹಣದಲ್ಲಿ ಆಕ್ಸಿಜನ್ ಪೂರೈಕೆಗೆ ಮುಂದಾದ ಸುಮಲತಾ ಅಂಬರೀಶ್
ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಇತ್ತೀಚೆಗೆ ತುಸು ಸುದ್ದಿಯಲ್ಲಿದ್ದರು. ಸುಮಲತಾ ಅಂಬರೀಶ್ ಅವರು ತಮ್ಮ ಕ್ಷೇತ್ರ ಮಂಡ್ಯಕ್ಕೆ ಬರದೆ ಬಹುಕಾಲವಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಸಾಮಾಜಿಕ ಜಾಲತಾಣದಲ್ಲಿ 'ಮಂಡ್ಯ ಸಂಸದೆಯನ್ನು ಹುಡುಕಿಕೊಡಿ' ಪೋಸ್ಟರ್ಗಳು ಹರಿದಾಡಿದ್ದವು.
ಟೀಕೆಗಳಿಗೆ ಜವಾಬ್ದಾರಿಯುತವಾಗಿ ಉತ್ತರಿಸಿರುವ ಸುಮಲತಾ, ತಾವು ಸಕ್ರಿಯವಾಗಿದ್ದು, ಕೊರೊನಾ ಸಂಕಷ್ಟದಲ್ಲಿ ಕ್ಷೇತ್ರದ ಜೊತೆಗೆ ನಿಲ್ಲುವುದಕ್ಕೆ ಬದ್ಧ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಸುಮಲತಾ, 'ಜಿಲ್ಲಾಧಿಕಾರಿಗಳು, ಡಿಎಚ್ಓ ಅವರುಗಳು ಜಿಲ್ಲೆಯಲ್ಲಿ ಪ್ರತಿನಿತ್ಯ 3000 ಲೀಟರ್ ಆಕ್ಸಿಜನ್ ಕೊರತೆ ಇರುವುದಾಗಿ ಗಮನಕ್ಕೆ ತಂದರು. ಪ್ರಸ್ತುತ ಎಂಪಿ ಫಂಡ್ ಇಲ್ಲದೇ ಇರುವ ಕಾರಣ ಹಾಗೂ ಇತರೆ ಮೂಲಗಳ ಅನುದಾನಗಳು ಬರುವುದು ತಡವಾಗುವ ಕಾರಣ ನಾನೇ ಸ್ವಂತ ಹಣದಿಂದ ಪ್ರತಿದಿನ 2000 ಲೀಟರ್ ಆಕ್ಸಿಜನ್ ಪೂರೈಕೆ ವ್ಯವಸ್ಥೆ ಮಾಡಲಿದ್ದೇನೆ' ಎಂದಿದ್ದಾರೆ ಸುಮಲತಾ.
'ಆಕ್ಸಿಜನ್ ತುಂಬಿಸಲು ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರೆಯಲು ಬಿಡಲಾಗದು. ಮಂಡ್ಯಕ್ಕೆ ಸ್ವಂತ ಆಕ್ಸಿಜನ್ ಉತ್ಪಾದನಾ ಘಟಕ ಬೇಕು. ಅತ್ಯಂತ ಶೀಘ್ರದಲ್ಲಿ ಘಟಕ ಸ್ಥಾಪನೆಗೆ ಕಾರ್ಯಕೈಗೊಳ್ಳಿರೆಂದು ಸೂಚಿಸಿದ್ದೇನೆ' ಎಂದೂ ಸಹ ಸುಮಲತಾ ಹೇಳಿದ್ದಾರೆ.
Recommended Video
ಆಕ್ಸಿಜನ್ ಘಟನ ಸ್ಥಾಪಿಸಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸುವ ಭರವಸೆ ನೀಡಿದ್ದೇನೆ, ಘಟಕ ಸ್ಥಾಪನೆಗೆ ಬೇಕಾದ ಅನುಮತಿ ನೀಡುವಂತೆಯೂ ಸೂಚಿಸಿದ್ದೇನೆ. ಕೋವಿಡ್ ಮೂರನೇ ಅಲೆ ಬರುವ ವೇಳೆಗೆ ಜಿಲ್ಲೆಯಲ್ಲಿ 13,000 ಲೀಟರ್ ಸಾಮರ್ಥ್ಯದ ಘಟಕ ಕಾರ್ಯನಿರ್ವಹಿಸುತ್ತಿರುತ್ತದೆ ಎಂದಿದ್ದಾರೆ ಸುಮಲತಾ.