Don't Miss!
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Automobiles ಭರ್ಜರಿ ಮೈಲೇಜ್, ಬಹುಬೇಡಿಕೆಯ ಮಾರುತಿ ಕಾರಿನ ಮೇಲೆ ಭರ್ಜರಿ ಡಿಸ್ಕೌಂಟ್
- Finance ಬ್ಯಾಂಕುಗಳ ಮೇಲೆ ನಡೆಯಲಿದ್ಯಾ ಸೈಬರ್ ಅಟ್ಯಾಕ್! ಎಚ್ಚರ ಎಚ್ಚರ ಎಂದ ಆರ್ಬಿಐ
- News ಆಜಾನ್ ಕೂಗುತ್ತಿದ್ದಾಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ: ವಿಡಿಯೋ ಹಂಚಿಕೊಂಡು ವಿಜಯೇಂದ್ರ ಕಿಡಿ
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಶ್ಮಿಕಾ ಬಿಟ್ಟು ಹೋದ ಸಿನಿಮಾಗೆ ಸಿಕ್ಕಳು ಹೊಸ ನಾಯಕಿ
Recommended Video
ನಟಿ ರಶ್ಮಿಕಾ ಮಂದಣ್ಣ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಇದ್ದಾರೆ. ಈ ಕಾರಣದಿಂದ ಅವರು 'ವೃತ್ರ' ಸಿನಿಮಾವನ್ನು ಕೈ ಬಿಟ್ಟಿದ್ದರು. ಆದರೆ, ಇದೀಗ ರಶ್ಮಿಕಾ ಜಾಗಕ್ಕೆ ಹೊಸ ನಾಯಕಿಯ ಆಯ್ಕೆ ಆಗಿದೆ.
ನಟಿ ನಿತ್ಯಾ ಶ್ರೀ 'ವೃತ್ರ' ಸಿನಿಮಾದ ನಾಯಕಿ ಆಗಿದ್ದಾರೆ. ಇದು ಅವರ ಎರಡನೇ ಕನ್ನಡ ಸಿನಿಮಾವಾಗಿದೆ. ಚಿತ್ರದಲ್ಲಿ ನಾಯಕಿ ಪಾತ್ರಕ್ಕೆ ತುಂಬ ಪ್ರಾಮುಖ್ಯತೆ ಇದ್ದು, ನಿತ್ಯಾ ಶ್ರೀ ಈ ಪಾತ್ರಕ್ಕೆ ಸೂಕ್ತ ಎಂದು ಚಿತ್ರತಂಡ ನಿರ್ಧಾರ ಮಾಡಿದೆ.
'ವೃತ್ರ' ಚಿತ್ರದಿಂದ ನಟಿ ರಶ್ಮಿಕಾ ಮಂದಣ್ಣ ಹೊರಬರಲು ಅಸಲಿ ಕಾರಣವೇನು.?
ನಿತ್ಯಾ ಶ್ರೀ ಈ ಹಿಂದೆ ಮಣಿರತ್ನಂ ನಿರ್ದೇಶನದ ಒಂದು ಚಿತ್ರಗಳಲ್ಲಿ ಸಣ್ಣ ಪಾತ್ರವನ್ನು ನಿರ್ವಹಿಸಿದ್ದರು. ನಟನೆಯಲ್ಲಿ ಅನುಭವ ಇರುವ ಅವರಿಗೆ ಈಗ ಒಂದು ಒಳ್ಳೆಯ ಅವಕಾಶ ಸಿಕ್ಕಿದೆ. ಗೌತಮ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಮೊದಲ ಸಿನಿಮಾವಾಗಿದೆ. ರಕ್ಷಿತ್ ಶೆಟ್ಟಿ ಅವರ ಬ್ಯಾನರ್ ನಲ್ಲಿ ಗೌತಮ್ ಕೆಲಸ ಮಾಡುತ್ತಿದ್ದರು.
'ವೃತ್ರ' ಸಿನಿಮಾ ಬಿಟ್ಟ ಬಗ್ಗೆ ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ''ವೃತ್ರ ಮಹಿಳಾ ಪ್ರಧಾನ ಸಿನಿಮಾ. ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸುವ ಮಟ್ಟಕ್ಕೆ ನಾನಿನ್ನೂ ಬೆಳೆದಿಲ್ಲ. ನನ್ನಿಂದ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ತೊಂದರೆ ಆಗಬಾರದು. ಹೀಗಾಗಿ ಚಿತ್ರದಿಂದ ಹೊರಗೆ ಬಂದಿದ್ದೇನೆ'' ಎಂದು ತಿಳಿಸಿದ್ದಾರೆ.