Don't Miss!
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಣೆ ಮಾಡಿ ಹೇಳುತ್ತೇನೆ, ನನಗೆ ತಾಯ್ತನ ಬೇಡ' ಎಂದ ನಟಿ ಪಾರುಲ್ ಯಾದವ್
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಿವುಡ್ ಮತ್ತು ಸ್ಯಾಂಡಲ್ ವುಡ್ ಕಲಾವಿದರು ಸೇರಿದಂತೆ ಎಲ್ಲಾ ಭಾಷೆಯ ಸೆಲೆಬ್ರಿಟಿಗಳು ಸಹ ಈ ಕೃತ್ಯ ಖಂಡಿಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
ಈ ಪ್ರಕರಣ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ನಟಿ ಪಾರುಲ್ ಯಾದವ್ ತಾನು ತಾಯಿಯಾಗುವುದಿಲ್ಲ, ಹೆಣ್ಣು ಮಗುವಾದರೆ ಏನು ಗತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಾರುಲ್ ಆತಂಕ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಪುರುಷರ್ಯಾರೂ ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವಾ? ನಟಿ ಪಾರುಲ್ ಯಾದವ್
"ತಾಯ್ತನವೆ ಹೆಣ್ಣಿನ ಸಾರಂಶ. ಆದರೆ ಈಗ ನಾನು ತಾಯಿ ಆಗಲು ಬಯಸುವುದಿಲ್ಲ. ಒಂದು ಹೆಣ್ಣಾಗಿ ಹೀಗೆ ಹೇಳುವುದು ತುಂಬಾ ಕಷ್ಟ. ಆದರೆ ನಾನು ಆಣೆ ಮಾಡಿ ಹೇಳುತ್ತೇನೆ. ನಾನು ನಿಜಕ್ಕೂ ತಾಯ್ತನ ತ್ಯಾಜಿಸುತ್ತೇನೆ. ನನ್ನ ಮಗು ಹೆಣ್ಣಾದರೆ ಏನು ಗತಿ?. ಈ ದೇಶ ಮಹಿಳೆಯರಿಗೆ ಕ್ರೂರಿಯಾಗಿದೆ." ಎಂದು ಹೇಳಿದ್ದಾರೆ.
ಇತ್ತೀಚಿಗೆ ಡ್ರಗ್ಸ್ ಪ್ರಕರಣ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಕೇವಲ ನಟಿಯರನ್ನು ಮಾತ್ರ ಟಾರ್ಗೆಟ್ ಮಾಡಲಾಗಿದೆ ಎಂದು ಪಾರುಲ್ ಆಕ್ರೋಶ ವ್ಯಕ್ತಪಡಿಸಿದ್ದರು. ಇಲ್ಲಿ ಪುರುಷರು ಯಾರು ಡ್ರಗ್ಸ್ ತೆಗೆದುಕೊಳ್ಳುವುದಿಲ್ಲವಾ ಎಂದು ಪ್ರಶ್ನೆ ಮಾಡಿದ್ದಾರೆ.
Recommended Video
ಡ್ರಗ್ಸ್ ಪ್ರಕರಣದ ತನಿಖೆ ವಿರುದ್ಧವೂ ಪಾರುಲ್ ಕೆಂಡಕಾರಿದ್ದರು. ನಟಿಯರನ್ನು ಬಂಧಿಸಿ ಅವರ ಖಾಸಗಿ ವಿಡಿಯೋಗಳನ್ನು ಲೀಕ್ ಮಾಡುತ್ತಿರುವವರ ವಿರುದ್ಧ ಪಾರುಲ್ ಕಿಡಿಕಾರಿದ್ದರು. ದೇಶದಲ್ಲಿ ಭಯಾನಕ ಸಮಸ್ಯೆಗಳು ಸಾಕಷ್ಟಿವೆ. ಆದರೆ ಅಂತಹ ವಿಷಯಗಳು ಯಾಕೆ ಚರ್ಚೆಯಾಗುತ್ತಿಲ್ಲ, ಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ಬೇಕು ಅಂತನೆ ಹೆಣೆದಿರುವ ತಂತ್ರವಿದು ಎಂದು ಪಾರುಲ್ ಆಕ್ರೋಶ ವ್ಯಕ್ತಡಿಸಿದ್ದರು.