Don't Miss!
- News ಕಾಂಗ್ರೆಸ್ ಸರ್ಕಾರ ನೀಡಿತ್ತು ಖಾಲಿ ಚೊಂಬು; ಮೋದಿ ಅದನ್ನು ಅಕ್ಷಯವನ್ನಾಗಿಸಿದ್ದಾರೆ: ಎಚ್ಡಿಡಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರುದ್ರಿ' ಟ್ರೈಲರ್ ರಿಲೀಸ್ ವೇಳೆ ಭಾವುಕರಾದ ನಟಿ ಪಾವನಾ ಗೌಡ
ಹೆಣ್ಣುಮಕ್ಕಳ ಮೇಲಾಗುವ ದೌರ್ಜನ್ಯದ ವಿರುದ್ಧ ಹೋರಾಡುವ ಸಿನಿಮಾ 'ರುದ್ರಿ'. ಒಂದಿಷ್ಟು ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಮಾಡಿರುವ ರುದ್ರಿ ಸಿನಿಮಾದ ಟ್ರೈಲರ್ ಇತ್ತೀಚಿಗಷ್ಟೆ ಚಿತ್ರಾಭಿಮಾನಿಗಳ ಮುಂದೆ ಬಂದಿದೆ. ಈ ಟ್ರೈಲರ್ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಯುವ ನಿರ್ದೇಶಕ ದೇವೇಂದ್ರ ಬಡಿಗೇರ್ ನಿರ್ದೇಶನದಲ್ಲಿ ಮೂಡಿಬಂದ ಸಿನಿಮಾ ಟ್ರೈಲರ್ ನಲ್ಲಿಯೆ ಭರವಸೆ ಮೂಡಿಸಿದೆ.
ರುದ್ರಿ ಹೆಸರೇ ಹೇಳುವ ಹಾಗೆ ಇದು ಮಹಿಳಾ ಪ್ರಧಾನ ಸಿನಿಮಾ. ಉತ್ತರ ಕರ್ನಾಟಕ ಶೈಲಿಯಲ್ಲಿ ಸಿನಿಮಾ ಚಿತ್ರೀಕರಣಗೊಂಡಿದೆ. ಇತ್ತೀಚಿಗೆ ಚಿತ್ರದ ಟ್ರೈಲರ್ ಅನ್ನು ಕಾನ್ರಾಡ್ ಹೋಟೆಲ್ನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ರೇಣುಕಾ ಯೋಗರಾಜ್ ಭಟ್, ಮಿಷನ್ ಮಂಗಲ್ ಖ್ಯಾತಿಯ ನಿರ್ದೇಶಕ ಜಗನ್ ಶಕ್ತಿ, ನಿರ್ಮಾಪಕ ಸಿ.ಆರ್ ಮನೋಹರ್, ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
'ರುದ್ರಿ'ಯ ಅವತಾರದಲ್ಲಿ ಬಂದ 'ಜಾಕ್ಸನ್' ಪಾವನಾ ಗೌಡ
ಚಿತ್ರದ ನಿರ್ದೇಶಕ ಬಡಿಗೇರ್ ದೇವೇಂದ್ರ ಮಾತನಾಡಿ, "ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆದಾಗ ಅವರು ಅದನ್ನು ಅದುಮಿಟ್ಟುಕೊಳ್ಳುವುದೇ ಹೆಚ್ಚು. ಈ ರೀತಿಯ ನೈಜ ಘಟನೆಗಳು ಈ ಸಿನಿಮಾಕ್ಕೆ ಸ್ಪೂರ್ತಿ. ಎಂದು ಹೇಳಿದರು.
ಇನ್ನು ನಟಿ ಪಾವನಾ ಮಾತನಾಡಿ ಇದು ಮಹಿಳಾ ಪ್ರಧಾನ ಚಿತ್ರ. ಅದರಲ್ಲೂ ಹೆಣ್ಣುಮಕ್ಕಳ ಮೇಲಿನ ಕಾಳಜಿಯಿಂದ ನಿರ್ಮಾಣವಾದ ಈ ಸಿನಿಮಾಕ್ಕೆ ದೊಡ್ಡ ಮಟ್ಟದ ಪ್ರೋತ್ಸಾಹದ ಅಗತ್ಯವಿದೆ. ಎಲ್ಲಾ ಚಿತ್ರಗಳಿಗೂ ಒಂದೇ ರೀತಿಯ ಗೌರವ, ಪ್ರೀತಿ ಸಿಗಲಿ, ಕೊನೇ ಪಕ್ಷ 2020ರಲ್ಲಿಯಾದರೂ ಕೆಲವು ಮನಸ್ಥಿತಿಗಳು ಬದಲಾಗಲಿ ಎಂದು ಮಾತನಾಡುತ್ತ ಭಾವುಕರಾದರು.