Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಚೇಂದ್ರ ಪ್ರಸಾದ್ ಅವರಂತಹ ಪತಿಯನ್ನು ಪಡೆದ ನಾನು ತುಂಬಾ ಅದೃಷ್ಟಶಾಲಿ: ಪವಿತ್ರಾ ಲೋಕೇಶ್!
ಕನ್ನಡ ನಟಿ ಪವಿತ್ರಾ ಲೋಕೇಶ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಸಿನಿಮಾಗಳಲ್ಲಿ ಬೇಡಿಕೆಯ ಪೋಷಕ ನಟಿ. ಸದ್ಯ ಪವಿತ್ರಾ ಲೋಕೇಶ್ ಸಿನಿಮಾದಿಂದ ಅಲ್ಲ. ಅವರ ವೈಯಕ್ತಿಕ ವಿಚಾರಗಳಿಗೆ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ.
ಕಳೆದ ಕೆಲವು ದಿನಗಳಿಂದ ಪವಿತ್ರಾ ಲೋಕೇಶ್ ಅವರ ಹೆಸರು ತೆಲುಗಿನ ಹಿರಿಯ ನಟ ನರೇಶ್ ಜೊತೆ ತಳುಕು ಹಾಕಿಕೊಂಡಿದೆ. ನರೇಶ್ ಜೊತೆ ಪವಿತ್ರಾ ಲೋಕೇಶ್ ಮೂರನೇ ಮದುವೆ ಆಗಲಿದ್ದಾರೆ ಎಂಬ ಸುದ್ದಿಗಳು ಟಾಲಿವುಡ್ನಲ್ಲಿ ಹಲ್ಚಲ್ ಎಬ್ಬಿಸಿದೆ.
Exclusive:ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟನ ನರೇಶ್ ಮದುವೆ: ಅಸಲಿ ಮ್ಯಾಟರ್ ಏನು?
ಮದುವೆ ವಿಷಯ ದೊಡ್ಡ ಮಟ್ಟಕ್ಕೆ ಚರ್ಚೆಯಾಗುತ್ತಿದ್ದರೂ, ಪವಿತ್ರಾ ಲೋಕೇಶ್ ಇದೂವರೆಗೂ ಪ್ರತಿಕ್ರಿಯೆ ನೀಡಿಲ್ಲ. ಈ ವಿಷಯ ಚರ್ಚೆಯಾಗುತ್ತಿರುವಾಗಲೇ ನಟಿ ತೆಲುಗು ಚಾನೆಲ್ ಒಂದಕ್ಕೆ ನೀಡಿದ ಹಳೆಯ ಸಂದರ್ಶನ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಸಂದರ್ಶನದಲ್ಲಿ ಪವಿತ್ರಾ ಪತಿ ಸುಚೇಂದ್ರ ಪ್ರಸಾದ್ ಬಗ್ಗೆ ಹೇಳಿದ ಮಾತುಗಳೇ ವೈರಲ್ ಆಗುತ್ತಿವೆ.
ಪವಿತ್ರಾ-ನರೇಶ್ ದೇವಸ್ಥಾನಕ್ಕೆ ಒಟ್ಟಿಗೆ ಹೋಗಿದ್ದೇಕೆ?
ತೆಲುಗು ಚಿತ್ರರಂಗದ ಜನಪ್ರಿಯ ನಟಿ ವಿಜಯ ನಿರ್ಮಲಾ ಅವರ ಪುತ್ರನೇ ನರೇಶ್. ಟಾಲಿವುಡ್ನಲ್ಲಿ ಪೋಷಕ ಪಾತ್ರಗಳಲ್ಲಿ ಜನಪ್ರಿಯರಾಗಿರುವ ನರೇಶ್ರೊಂದಿಗೆ ಪವಿತ್ರಾ ಲೋಕೇಶ್ ಹೆಸರು ತಳುಕು ಹಾಕಿಕೊಂಡಿದೆ. ಆದರೆ, ನರೇಶ್ ಆಪ್ತರು ಮಾತ್ರ ಈ ಸುದ್ದಿಯನ್ನು ಅಲ್ಲಗೆಳೆದಿದೆ. ಪವಿತ್ರಾ ಲೋಕೇಶ್ ಹಾಗೂ ನರೇಶ್ ಇಬ್ಬರೂ ಮಹಾಬಲಿಪುರಂನಲ್ಲಿರುವ ದೇವಸ್ಥಾನವೊಂದಕ್ಕೆ ಹೋಗಿದ್ದರು. ಅಲ್ಲಿ ಇಬ್ಬರೂ ಒಟ್ಟಿಗಿದ್ದ ಫೋಟೊಗಳು ವೈರಲ್ ಆಗಿದ್ದವು. ಇದೇ ಪವಿತ್ರಾ ಲೋಕೇಶ್ ಹಾಗೂ ನರೇಶ್ ಬಗ್ಗೆ ಸುದ್ದಿ ಹಬ್ಬಲು ಕಾರಣ ಎನ್ನಲಾಗಿದೆ.
ರಾಖಿ ಕಟ್ಟಿಯಾದರೂ ಪವಿತ್ರಾ ಅನ್ನು ಮನೆಯಲ್ಲೇ ಇರಿಸಿಕೊಳ್ಳುವೆ: ಸವಾಲು ಹಾಕಿದ ನರೇಶ್!?
5 ವರ್ಷದ ಹಳೆಯ ವಿಡಿಯೋ ವೈರಲ್
ಟಾಲಿವುಡ್ನಲ್ಲಿ ಪವಿತ್ರಾ ಲೋಕೇಶ್ ಹಾಗೂ ನರೇಶ್ ಇಬ್ಬರ ಮದುವೆ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಆದರೆ, ಇಬ್ಬರೂ ಇದೂವರೆಗೂ ಈ ವದಂತಿಗಳಿಗೆ ಪ್ರತಿಕ್ರಿಯೆ ನೀಡಿಲ್ಲ. ಹಾಗಂತ ಊಹಾಪೋಹಗಳು ಮಾತ್ರ ನಿಂತಿಲ್ಲ. ಸದ್ಯಕ್ಕೀಗ ತೆಲುಗಿನಲ್ಲಿ ಪವಿತ್ರಾ ಲೋಕೇಶ್ ನೀಡಿದ ಸಂದರ್ಶನವೊಂದು ಮತ್ತೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಪವಿತ್ರಾ ಲೋಕೇಶ್ ಪತಿ ಸುಚೇಂದ್ರ ಪ್ರಸಾದ್ ಅವರ ಬಗ್ಗೆ ಹಲವು ಸಂಗತಿಗಳನ್ನು ರಿವೀಲ್ ಮಾಡಿದ್ದಾರೆ.
ಸುಚೇಂದ್ರ ಪ್ರಸಾದ್ ಒಳ್ಳೆಯ ವ್ಯಕ್ತಿ
ತೆಲುಗಿನ ಈ ಸಂದರ್ಶನದಲ್ಲಿ ಪವಿತ್ರಾ ಲೋಕೇಶ್ ಪತಿ ಸುಚೇಂದ್ರ ಪ್ರಸಾದ್ ಅವರ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. "ಸುಚೇಂದ್ರ ಪ್ರಸಾದ್ ತುಂಬಾ ದೊಡ್ಡ ವ್ಯಕ್ತಿ. ಅವರು ತುಂಬಾ ಒಳ್ಳೆಯ ವ್ಯಕ್ತಿತ್ವ. ಅಂತಹ ವ್ಯಕ್ತಿಯನ್ನು ಬೇರೆಯವರಲ್ಲಿ ನೋಡಲು ಸಾಧ್ಯವೇ ಇಲ್ಲ. ಅವರಲ್ಲಿ ಒಂದೇ ಒಂದು ಲೋಪವೂ ಕಂಡು ಬರುವುದಿಲ್ಲ." ಎಂದು ಪವಿತ್ರಾ ಲೋಕೇಶ್ ಆ ಸಂದರ್ಶನದಲ್ಲಿ ಹೇಳಿದ್ದರು.
ಪವಿತ್ರ ಲೋಕೇಶ್, ಸುಚೇಂದ್ರ ಪ್ರಸಾದ್ ನಡುವೆ ಆಗಿದಿದ್ದೇನು? ಯಾರು ಈ ನರೇಶ್!
ನಾನು ಅದೃಷ್ಟಶಾಲಿ
ಇದೇ ಸಂದರ್ಶನದಲ್ಲಿ ಸುಚೇಂದ್ರ ಪ್ರಸಾದ್ ಅವರನ್ನು ಪತಿಯಾಗಿ ಪಡೆದಿದ್ದಕ್ಕೆ ನಾನು ಅದೃಷ್ಟಶಾಲಿ ಎಂದಿದ್ದರು. " ಸುಚೇಂದ್ರ ಪ್ರಸಾದ್ ಅಂತಹ ಪತಿಯನ್ನು ಪಡೆದಿರುವುದಕ್ಕೆ ನಾನು ತುಂಬಾ ಅದೃಷ್ಟಶಾಲಿ. ಅವರಿಗೆ ಸ್ವಲ್ಪ ಸಮಯ ಸಿಕ್ಕರೂ ಸಾಕು, ನನಗಾಗಿ ಅಡುಗೆ ಮಾಡುತ್ತಾರೆ. ಮನೆಗೆಲಸವನ್ನೆಲ್ಲಾ ಮಾಡುತ್ತಾರೆ" ಎಂದು ಪವಿತ್ರಾ ಹೇಳಿದ್ದರು. ಇದೇ ವಿಡಿಯೋ ಈಗ ಟಾಲಿವುಡ್ನಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.