Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪ: ಕೇಂದ್ರದ ವಿರುದ್ಧ ನಟಿ ರಮ್ಯಾ ಕಿಡಿ
ಸಿನಿಮಾಟೋಗ್ರಫಿ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಹೊಸ ಕಾಯ್ದೆಯನ್ವಯ ಸರ್ಕಾರವೇ ಪರೋಕ್ಷವಾಗಿ ಸಿನಿಮಾಗಳ ಸೆನ್ಸಾರ್ ನಿರ್ಣಯ ಮಾಡಬಹುದಾದ ಹಕ್ಕು ಪಡೆದುಕೊಳ್ಳಲಿದೆ. ಸಿನಿಮಾಟೊಗ್ರಫಿ ಕಾಯ್ದೆಗೆ ತಿದ್ದುಪಡಿಯು ನಿರ್ದೇಶಕನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಿದೆ ಎಂದು ಆರೋಪಿಸಿ ಭಾರತೀಯ ಸಿನಿರಂಗದ ಹಲವು ಪ್ರಮುಖರು ಒಕ್ಕೂರಲಾಗಿ ಕಾಯ್ದೆಯ ವಿರುದ್ಧ ದನಿ ಎತ್ತಿದ್ದಾರೆ.
ಈ ಬಗ್ಗೆ ನಟಿ, ರಾಜಕಾರಣಿ ರಮ್ಯಾ ಕೂಡ ವಿರೋಧ ವ್ಯಕ್ತ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಮ್ಯಾ 'ನಾವು ನೋಡುವ ವಿಚಾರದ ಮೇಲು ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ' ಎಂದು ಕಿಡಿ ಕಾರಿದ್ದಾರೆ.
ಈಗಾಗಲೇ ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ ವಿರೋಧಿಸಿ ನಟ ಫರ್ಹಾನ್ ಅಖ್ತರ್, ಅನುರಾಗ್ ಕಶ್ಯಪ್, ಶಬಾನಾ ಅಜ್ಮಿ, ಹನ್ಸಲ್ ಮೆಹ್ತಾ, ದಿಬಾಕರ್ ಬ್ಯಾನರ್ಜಿ, ಜೋಯಾ ಅಖ್ತರ್, ಕಮಲ್ ಹಾಸನ್ ಸೇರಿದಂತೆ ಇನ್ನೂ ಹಲವರು ಸಿನಿಮಾಟೊಗ್ರಫಿ ಕಾಯ್ದೆ 2021 ತಿದ್ದುಪಡಿ ವಿರುದ್ಧ ಬಹಿರಂಗ ಪತ್ರ ಬರೆದಿದ್ದಾರೆ.
ಸದ್ಯ ಈ ಬಗ್ಗೆ ನಟಿ ರಮ್ಯಾ ಕೂಡ ಧ್ವನಿ ಎತ್ತಿದ್ದು, "ನಾವು ನೋಡುವ ವಿಚಾರದಲ್ಲಿ ಸರ್ಕಾರ ಯಾಕೆ ಹಸ್ತಕ್ಷೇಪ ಮಾಡಬೇಕು? ಕೇಂದ್ರದವರು ಎಲ್ಲಾ ಕಡೆ ಇದ್ದಾರೆ. ನಮ್ಮ ಎಲ್ಲಾ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ (ಸಿಬಿಎಫ್ ಸಿ) ಈಗಾಗಲೇ ಎಲ್ಲವನ್ನು ನಿಯಂತ್ರಣ ಮಾಡುತ್ತಿದೆ" ಎಂದು ಹೇಳಿದ್ದಾರೆ.
ತಿದ್ದುಪಡಿಯು ಅಂಗೀಕೃತಗೊಂಡರೆ ಸಿಬಿಎಫ್ ಸಿ ನೀಡಿದ ಪ್ರಮಾಣಪತ್ರವನ್ನು ಪ್ರಶ್ನಿಸುವ, ಪುನರ್ ಪರಿಶೀಲಿಸುವಂತೆ ಸೂಚಿಸುವ, ಬದಲಾಯಿಸುವಂತೆ ಸೂಚಿಸುವ ಅಧಿಕಾರವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಲಿದೆ.