Don't Miss!
- News
ಶಿಕ್ಷಕರಾಗಿ ಆಯ್ಕೆಯಾದರೂ ನೇಮಕಾತಿಯಲ್ಲಿ ಕಾನೂನು ತೊಡಕು, ಭವಿಷ್ಯದ ಆತಂಕದಲ್ಲಿ 13,363 ಅಭ್ಯರ್ಥಿಗಳು
- Sports
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅತಿವೇಗದ ಚಾಲನೆ ಪೂಜಾಗಾಂಧಿ ಬಂಧನ, ಬಿಡುಗಡೆ
ಇತ್ತೀಚೆಗೆ ನಟಿ ಪೂಜಾಗಾಂಧಿ ಅವರು ಅಪಘಾತ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ಸುದ್ದಿಯನ್ನು ಓದಿರುತ್ತೀರಿ. ಈ ಸಂಬಂಧ ಜಯನಗರ ಸಂಚಾರ ಪೊಲೀಸರು ಅವರನ್ನು ಬಂಧಿಸಿ ಬಳಿಕ ಜಾಮೀನು ಮೇರೆಗೆ ಬಿಡುಗಡೆಗೊಳಿಸಿದ್ದಾರೆ.
ಅವರ ವಿರುದ್ಧ ಹಲವಾರು ಕೇಸ್ ಗಳನ್ನು ದಾಖಲಿಸಿಕೊಂಡು ಬಂಧಿಸಲಾಗಿತ್ತು. ಅವುಗಳಲ್ಲಿ ನಿರ್ಲಕ್ಷ್ಯತನ ಮತ್ತು ಅತಿವೇಗದ ಚಾಲನೆ (ಐಪಿಸಿ ಸೆಕ್ಷನ್ 279), ಅಪಘಾತದಲ್ಲಿ ಗಾಯಗೊಳಿಸುವುದು (ಐಪಿಸಿ ಸೆಕ್ಷನ್ 337), ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರಿರುವುದು (ಐಪಿಸಿ 334 ಬಿ) ಹಾಗೂ ಮೋಟರ್ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. [ಜಯನಗರದಲ್ಲಿ ಪೂಜಾಗಾಂಧಿ ಕಾರಿಗೆ ಸ್ಕೂಟರ್ ಡಿಕ್ಕಿ]
ಘಟನೆಯಲ್ಲಿ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವ ಉಂಟಾಗಿದ್ದರಿಂದ ವರ್ಷಾ ಒಂದೆರಡು ನಿಮಿಷದಲ್ಲೇ ನಿತ್ರಾಣರಾದರು. ಕೂಡಲೇ ಸ್ಥಳೀಯರ ನೆರವು ಪಡೆದ ಪೂಜಾಗಾಂಧಿ, ಕಾರಿನಲ್ಲಿ ಜಯನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಘಟನೆ ವೇಳೆ ಪೂಜಾಗಾಂಧಿ ಅವರೇ ಕಾರು ಚಲಾಯಿಸುತ್ತಿದ್ದರು ಪ್ರತ್ಯಕ್ಷದರ್ಶಿಗಳು ಹೇಳಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ವರ್ಷಾ ಅವರ ಅಣ್ಣ ದೀಪಕ್ ಅವರು ಪೂಜಾಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಜಾಗಾಂಧಿ ಅವರನ್ನು ಬಂಧಿಸಿ ಬಳಿಕ ಠಾಣಾ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.