Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ ನಿಟ್ಟುಸಿರುಬಿಟ್ಟ ಅಭಿನೇತ್ರಿ ಪೂಜಾಗಾಂಧಿ
ಪೂಜಾಗಾಂಧಿ ಅಭಿನಯದ ಈ ಚಿತ್ರ ಸಾಕಷ್ಟು ವಾದ ವಿವಾದಗಳಿಗೆ ಕಾರಣವಾಗಿದ್ದು ಗೊತ್ತೇ ಇದೆ. ಚಿತ್ರಕ್ಕೆ ಬಿಟ್ಟಿ ಪ್ರಚಾರ ಸಿಕ್ಕಿ ಅದೂ ಒಂದು ರೀತಿಯಲ್ಲಿ ಒಳ್ಳೆಯದೇ ಆಯಿತು ಅನ್ನಿ. ಆದರೆ ಚಿತ್ರದಲ್ಲಿನ ಕೆಲವು ಹಾಟ್ ದೃಶ್ಯಗಳು, ಪೂಜಾಗಾಂಧಿ ಅವರ 70-80ರ ದಶಕದ ಗೆಟಪ್ ಕುತೂಹಲ ಮೂಡಿಸುತ್ತಿದೆ.
ಇವೆಲ್ಲಾ ಕಾರಣಗಳಿಗಾಗಿ ಅಭಿಮಾನಿಗಳು, ಚಿತ್ರಪ್ರೇಮಿಗಳು 'ಅಭಿನೇತ್ರಿ' ಚಿತ್ರವನ್ನು ನಿರೀಕ್ಷಿಸುವಂತಾಗಿದೆ. ಇದೀಗ ಪೂಜಾಗಾಂಧಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ತಮ್ಮ ಚಿತ್ರಕ್ಕೆ ಸೆನ್ಸಾರ್ ನಲ್ಲಿ ಯಾವ ಸರ್ಟಿಫಿಕೇಟ್ ಸಿಗುತ್ತದೋ ಎಂದು ಅವರು ಕಂಗಾಲಾಗಿದ್ದರು. [ಬೆತ್ತಲೆ ಬೆನ್ನು ತೋರಿದ 'ಅಭಿನೇತ್ರಿ' ಪೂಜಾಗಾಂಧಿ]
ಈಗಾಗಲೆ ಚಿತ್ರದ ಟಿವಿ ಪ್ರಸಾರ ಹಕ್ಕುಗಳು ಜೀ ಕನ್ನಡ ಪಾಲಾಗಿವೆ. ಸರಿಸುಮಾರು 150 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಪೂಜಾಗಾಂಧಿ ಮುಂದಾಗಿದ್ದಾರೆ. ಪೂಜಾಗಾಂಧಿ ಅವರ ವೃತ್ತಿ ಬದುಕಿನಲ್ಲಿ ಈ ಚಿತ್ರ ಮತ್ತೊಂದು ತಿರುವು ನೀಡಲಿದೆಯಾ ಎಂಬುದು ಗೊತ್ತಾಗಬೇಕಾದರೆ ಸ್ವಲ್ಪ ದಿನ ಕಾಯಬೇಕು.
ಈ ಚಿತ್ರದ ಮೂಲಕ ಸಹಾಯಕ ನಿರ್ದೇಶಕನಿಂದ ನಿರ್ದೇಶಕರಾಗಿ ಬದಲಾಗುತ್ತಿದ್ದಾರೆ ಸತೀಶ್ ಪ್ರಧಾನ್. ಚಿತ್ರದಲ್ಲಿ ಮಕರಂದ್ ದೇಶಪಾಂಡೆ ಗಮನಾರ್ಹ ಪಾತ್ರ ಪೋಷಿಸಿದ್ದು, ಅತುಲ್ ಕುಲಕರ್ಣಿ, ಶ್ರೀನಗರ ಕಿಟ್ಟಿ ಸಹ ಇದ್ದಾರೆ. ಮನೋಮೂರ್ತಿ ಅವರ ಸಂಗೀತ, ಕೆಸಿ ಚಂದ್ರಶೇಖರ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. (ಫಿಲ್ಮಿಬೀಟ್ ಕನ್ನಡ)