Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟಕ್ಕೆ ಸಿಲುಕಿದ ನೇಕಾರ ದಂಪತಿಯ ನೆರವಿಗೆ ಧಾವಿಸಿದ ನಟಿ ಪ್ರಣೀತಾ
ಭಾರಿ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಮನೆಗಳಿಗೆ ನೀರು ನುಗ್ಗುತ್ತಿದೆ, ಮನೆಗಳು ಪ್ರವಾಹಕ್ಕೆ ಸಿಲುಕುತ್ತಿದೆ. ಹೀಗೆ, ಭಾರಿ ಮಳೆಯಿಂದಾಗಿ ಉಡುಪಿಯ ನೇಕಾರ ದಂಪತಿ ಮನೆ ಜಲಾವೃತವಾಗಿದೆ.
Recommended Video
ಕೈ ಮಗ್ಗದ ಯಂತ್ರ ಸಹ ನೀರು ಪಾಲಾಗಿದೆ. ದಿನದ ಬದುಕಿಗಾಗಿ ಅದನ್ನೇ ನಂಬಿಕೊಂಡಿದ್ದ ದಂಪತಿಗೆ ಈಗ ದಿಕ್ಕುತೋಚದಂತೆ ಆಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ನಟಿ ಪ್ರಣಿತಾ ಸುಭಾಷ್ ನೆರವಿಗೆ ಧಾವಿಸಿದ್ದಾರೆ. ಹಿರಿಯ ದಂಪತಿಗೆ ಸಹಾಯಹಸ್ತ ಚಾಚುವುದಾಗಿ ಭರವಸೆ ನೀಡಿದ್ದಾರೆ.
ಡಿಜೆ ಹಳ್ಳಿ ಗಲಭೆ ಖಂಡಿಸಿ ನಟಿ ಪ್ರಣಿತಾ ಸುಭಾಷ್ ಟ್ವೀಟ್
72 ವರ್ಷದ ಲಕ್ಷ್ಮಣ ಶೆಟ್ಟಿಗಾರ್ ಮತ್ತು ಪತ್ನಿ ಯಕ್ಷಗಾನ ಸೀರೆಗಳನ್ನು ನೇಯ್ಗೆ ಮಾಡುತ್ತಾರೆ. ಒಂದು ಸೀರೆಯನ್ನು ಸುಮಾರು 400 ರೂಪಾಯಿಗೆ ಸಿದ್ದಪಡಿಸುತ್ತಾರೆ. ಆದ್ರೆ, ಭಾರಿ ಮಳೆಯಿಂದ ಮನೆ ಜಲಾವೃತವಾಗಿದೆ. ಕೈ ಮಗ್ಗದ ಯಂತ್ರ ಸಹ ಹಾನಿಯಾಗಿದೆ. ಹಾಗಾಗಿ, ಸಹಾಯ ಮಾಡಿ ಎಂದು ಪತ್ರಕರ್ತರೊಬ್ಬರು ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಟಿ ಪ್ರಣಿತಾ ''ಈ ಸುದ್ದಿ ನೋಡಿ ಬಹಳ ಕಷ್ಟವಾಗಿದೆ. ಆ ಕುಟುಂಬ ಸುರಕ್ಷಿತವಾಗಿದೆ ಎಂದು ಭಾವಿಸುತ್ತೇನೆ. ಮುಂಜಾನೆ ಸಣ್ಣದೊಂದು ಸಹಾಯ ಮಾಡುವ ಮೂಲಕ ದಿನ ಆರಂಭಿಸೋಣ. ನನಗೂ ಗೊತ್ತಿದೆ ಸಮಯ ಕಷ್ಟವಾಗಿದೆ ಅಂತ. ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿರುವವರಿಗೆ ಕೈಲಾದಷ್ಟು ಸಹಾಯ ಮಾಡೋಣ'' ಎಂದು ನಟಿ ಪ್ರಣಿತಾ ಮನವಿ ಮಾಡಿದ್ದಾರೆ.
ನಟಿ ಪ್ರಣಿತಾ ಅವರ ಈ ನಿರ್ಧಾರಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಾಕ್ಡೌನ್ ಸಮಯದಲ್ಲೂ ಪ್ರಣಿತಾ ತಮ್ಮ ಟ್ರಸ್ಟ್ ಮೂಲಕ ಅನೇಕರಿಗೆ ನೆರವು ನೀಡಿದ್ದಾರೆ.