Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್, ಉಪ್ಪಿ, ವಿಷ್ಣು ನಂತರ ಶಕ್ತಿದೇವತೆ ಮೊರೆ ಹೋದ ರಚಿತಾ ರಾಮ್
ಎಂತಹ ಸ್ಟಾರ್ ಗಳೇ ಆದರೂ ಗುರುಗಳು ಹಾಗೂ ದೇವರ ಭಕ್ತರಾಗಿರುತ್ತಾರೆ. ಅದೇ ರೀತಿಯಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಕಲಾವಿದರು ಶಕ್ತಿದೇವತೆಗಳ ಪೂಜಿಸುತ್ತಾ ಬಂದಿದ್ದಾರೆ. ಹ್ಯಾಟ್ರಿಕ್ ಹೀರೋ ಶಿಂಷಾ ಮಾರಮ್ಮ ದೇವಿಯನ್ನ ಪೂಜೆ ಮಾಡಿದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಚಾಮುಂಡೇಶ್ವರಿಯನ್ನ ಪೂಜಿಸುತ್ತಾರೆ.
ಇನ್ನು ಅನೇಕ ಸ್ಟಾರ್ ಗಳ ಆರಾಧ್ಯ ದೈವ ಆಗಿರುವ ಈ ದೇವತೆಯ ಮೊರೆ ಹೋಗಿದ್ದಾರೆ ಚಂದನವನದ ಡಿಂಪಲ್ ಕ್ವೀನ್ ರಚಿತಾ ರಾಮ್. ತುಮಕೂರಿನ ಬಳಿ ಇರುವ ದಸರಿಘಟ್ಟದಲ್ಲಿರುವ ಚೌಡೇಶ್ವರಿ ದೇವಿಯ ದೇವಾಸ್ಥಾನಕ್ಕೆ ರಚಿತಾ ರಾಮ್ ಇತ್ತಿಚಿಗಷ್ಟೇ ಭೇಟಿ ಕೊಟ್ಟಿದ್ದಾರೆ.
ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ದರಸಿಘಟ್ಟ ಚೌಡೇಶ್ವರಿ ದೇವಿಯ ಮೊರೆ ಹೋಗಿರೋ ರಚಿತಾ ರಾಮ್ ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ದೇವಿಯ ಪೂಜೆ ಮಾಡುವ ಅರ್ಚಕರ ಬಳಿ ಮಾತನಾಡಿದ್ದಾರಂತೆ.
ದಚ್ಚು ಚಿತ್ರಕ್ಕೆ ಮತ್ತೆ ರಚ್ಚುನೇ ನಾಯಕಿ
ರಚಿತಾ ರಾಮ್ ಅವರಿಗೂ ಮುಂಚೆ ಸಾಕಷ್ಟು ಸ್ಟಾರ್ ಕಲಾವಿದರು ಈ ದೇವಾಲಯಕ್ಕೆ ಬೇಟಿ ಕೊಟ್ಟಿದ್ದಾರೆ. ಶಕ್ತಿದೇವತೆ ಎಂದೇ ಪ್ರಖ್ಯಾತಿ ಪಡೆದಿರುವ ಧಸರಿಘಟ್ಟದ ದೇವಾಲಯಕ್ಕೆ ಯಶ್ಮ ಉಪೇಂದ್ರ ಹಾಗೂ ಮೈಸೂರಿನ ಮಹಾರಾಜರು, ಪ್ರಧಾನಿ ನರೇಂದ್ರ ಮೋದಿ ಇನ್ನೂ ಅನೇಕರು ಬಂದು ದೇವಿಗೆ ಪೂಜೆ ಸಲ್ಲಿಸಿದ್ದಾರೆ.