Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳಿಗೆ ಈ ವರ್ಷದಲ್ಲೊಂದು ಸಿಹಿ ಸುದ್ದಿ
ನಟಿ ರಾಧಿಕಾ ಕುಮಾರಸ್ವಾಮಿ ಒಂದು ಸಣ್ಣ ಗ್ಯಾಪ್ ನ ನಂತರ ಮತ್ತೆ ಬೆಳ್ಳಿತೆರೆಗೆ ಕಮ್ ಬ್ಯಾಕ್ ಮಾಡಿದ್ದಾರೆ. ಅರ್ಜುನ್ ಸರ್ಜಾ, ಜೆಡಿ ಚಕ್ರವರ್ತಿ ಅಭಿನಯದ 'ಕಾಂಟ್ರ್ಯಾಕ್ಟ್' ಚಿತ್ರದ ಮೂಲಕ ಮತ್ತೆ ನಾಯಕಿ ಆಗಿ ಮಿಂಚುತ್ತಿದ್ದಾರೆ.
ಇದರ ಜೊತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸಿ, ನಿರ್ದೇಶನ ಮಾಡುತ್ತಿರುವ 'ರಾಜೇಂದ್ರ ಪೊನ್ನಪ್ಪ' ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿ ಆಗಿದ್ದಾರೆ. ಹೀಗಿರುವಾಗ, ಇದೇ ವರ್ಷದಲ್ಲಿ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಲಿದ್ದೇನೆ ಎಂದು ರಾಧಿಕಾ ಹೇಳಿಕೊಂಡಿದ್ದಾರೆ.
ರಾಜಕೀಯಕ್ಕೆ ಗ್ರೀನ್ ಸಿಗ್ನಲ್ ಕೊಟ್ರಾ ರಾಧಿಕಾ ಕುಮಾರಸ್ವಾಮಿ!
ಹೌದು, ಕನ್ನಡದಲ್ಲಿ ಎರಡು ಚಿತ್ರಗಳನ್ನ ನಿರ್ಮಾಣ ಮಾಡಿರುವ ರಾಧಿಕಾ ಕುಮಾರಸ್ವಾಮಿ ಈಗ ಮೂರನೇ ಚಿತ್ರದ ನಿರ್ಮಾಣಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದಾರಂತೆ. ಎಲ್ಲ ಅಂದುಕೊಂಡಂತೆ ಆದರೇ, ಇದೇ ವರ್ಷ ಈ ಚಿತ್ರವನ್ನ ಶುರು ಮಾಡಲಿದ್ದಾರಂತೆ.
2012ರಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಮ್ಯಾ ಅಭಿನಯದ 'ಲಕ್ಕಿ' ಹಾಗೂ 2013 ರಲ್ಲಿ ಆದಿತ್ಯ ಹಾಗೂ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಸ್ವೀಟಿ ನನ್ನ ಜೋಡಿ' ಚಿತ್ರವನ್ನ ನಿರ್ಮಾಣ ಮಾಡಿದ್ದರು. ಮೂರು ವರ್ಷಗಳ ನಂತರ ಈಗ ಮೂರನೇ ಚಿತ್ರಕ್ಕೆ ಅಣಿಯಾಗುತ್ತಿರುವುದು ನಿಜಕ್ಕೂ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿಯಾಗಿದೆ.
ಕುಮಾರಸ್ವಾಮಿ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ರಾಧಿಕಾ ಖಡಕ್ ಉತ್ತರ