Don't Miss!
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಗಿಣಿ ಈಸ್ ಬ್ಯಾಕ್: ತುಪ್ಪದ ಹುಡುಗಿ ಕೈಯಲ್ಲಿರುವ ಚಿತ್ರಗಳು ಯಾವುದು?
ಶರಣ್ ಅವರ 'ಅದ್ಯಕ್ಷ ಇನ್ ಅಮೆರಿಕಾ' ಚಿತ್ರದ ಬಳಿಕ ನಟಿ ರಾಗಿಣಿ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. 2020ನೇ ವರ್ಷ ಕೊರೊನಾ ವೈರಸ್ ಕಾಟ ಹಾಗೂ ಡ್ರಗ್ಸ್ ಪ್ರಕರಣ ರಾಗಿಣಿ ಪಾಲಿಗೆ ಕೆಟ್ಟ ಘಳಿಗೆ ಆಗಿತ್ತು.
ಇದೀಗ, ಡ್ರಗ್ಸ್ ಕೇಸ್, ಜೈಲು ವಾಸ ಮುಗಿಸಿ ಬಂದಿರುವ ರಾಗಿಣಿ ಚಿತ್ರರಂಗದಲ್ಲಿ ಮತ್ತೆ ಬ್ಯುಸಿಯಾಗುವ ಸೂಚನೆ ನೀಡಿದ್ದಾರೆ. ಒಪ್ಪಿಕೊಂಡಿರುವ ಚಿತ್ರಗಳನ್ನು ಮಾಡಿಕೊಡಬೇಕು ಎಂಬ ಉದ್ದೇಶದಿಂದ ಮತ್ತೆ ಸಕ್ರಿಯರಾಗಿದ್ದಾರೆ.
ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಗಿಣಿ: ಕೆಟ್ಟ ಕಾಮೆಂಟ್ ಮಾಡೋರಿಗೆ ಹೇಳಿದ್ದೇನು?
ಇತ್ತೀಚಿಗಷ್ಟೆ ಕರ್ವ 3 ಎಂಬ ಹೊಸ ಸಿನಿಮಾ ಘೋಷಿಸಿದ್ದರು. ವಿಶಾಲ್ ಶೇಖರ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಕೃಷ್ಣ ಚೈತನ್ಯ ಬಂಡವಾಳ ಹಾಕುತ್ತಿದ್ದಾರೆ. ತಿಲಕ್ ಮತ್ತು ಮೇಘನಾ ಗಾಂವ್ಕರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ರಘು ಹಾಸನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಗಾಂಧಿಗಿರಿ' ಸಿನಿಮಾ ಕೊನೆಯ ಹಂತದ ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ. ಶೇಕಡಾ 80ರಷ್ಟು ಶೂಟಿಂಗ್ ಮುಗಿದ್ದು, ಕೆಲವು ದೃಶ್ಯ ಹಾಗೂ ಎರಡು ಹಾಡುಗಳು ಮಾತ್ರ ಉಳಿದಿದೆ. ಜೋಗಿ ಪ್ರೇಮ್ ಈ ಚಿತ್ರದಲ್ಲಿ ನಾಯಕನಾಗಿದ್ದು, ಈ ಸಿನಿಮಾ ಕೆಲಸ ಮತ್ತೆ ಆರಂಭಿಸಲಿದ್ದಾರೆ ರಾಗಿಣಿ.
ರಾಗಿಣಿ ನಟನೆಯ 'ನಾನೇ ನೆಕ್ಸ್ಟ್ ಸಿಎಂ' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮುಸ್ಸಂಜೆ ಮಹೇಶ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಮಾಡಿದ್ದಾರೆ. ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
Recommended Video
ಇದರ ಜೊತೆಗೆ ಸೋಮವಾರ ಪ್ರಮುಖ ವಿಷಯವೊಂದು ಪ್ರಕಟಿಸಲಿದ್ದಾರಂತೆ. ಹೊಸ ಸಿನಿಮಾ ಇರಬಹುದಾ ಎಂಬ ಕುತೂಹಲವೂ ಕಾಡುತ್ತಿದೆ.