Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಗಿಣಿ ಈಸ್ ಬ್ಯಾಕ್: ತುಪ್ಪದ ಹುಡುಗಿ ಕೈಯಲ್ಲಿರುವ ಚಿತ್ರಗಳು ಯಾವುದು?
ಶರಣ್ ಅವರ 'ಅದ್ಯಕ್ಷ ಇನ್ ಅಮೆರಿಕಾ' ಚಿತ್ರದ ಬಳಿಕ ನಟಿ ರಾಗಿಣಿ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. 2020ನೇ ವರ್ಷ ಕೊರೊನಾ ವೈರಸ್ ಕಾಟ ಹಾಗೂ ಡ್ರಗ್ಸ್ ಪ್ರಕರಣ ರಾಗಿಣಿ ಪಾಲಿಗೆ ಕೆಟ್ಟ ಘಳಿಗೆ ಆಗಿತ್ತು.
ಇದೀಗ, ಡ್ರಗ್ಸ್ ಕೇಸ್, ಜೈಲು ವಾಸ ಮುಗಿಸಿ ಬಂದಿರುವ ರಾಗಿಣಿ ಚಿತ್ರರಂಗದಲ್ಲಿ ಮತ್ತೆ ಬ್ಯುಸಿಯಾಗುವ ಸೂಚನೆ ನೀಡಿದ್ದಾರೆ. ಒಪ್ಪಿಕೊಂಡಿರುವ ಚಿತ್ರಗಳನ್ನು ಮಾಡಿಕೊಡಬೇಕು ಎಂಬ ಉದ್ದೇಶದಿಂದ ಮತ್ತೆ ಸಕ್ರಿಯರಾಗಿದ್ದಾರೆ.
ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಗಿಣಿ: ಕೆಟ್ಟ ಕಾಮೆಂಟ್ ಮಾಡೋರಿಗೆ ಹೇಳಿದ್ದೇನು?
ಇತ್ತೀಚಿಗಷ್ಟೆ ಕರ್ವ 3 ಎಂಬ ಹೊಸ ಸಿನಿಮಾ ಘೋಷಿಸಿದ್ದರು. ವಿಶಾಲ್ ಶೇಖರ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಕೃಷ್ಣ ಚೈತನ್ಯ ಬಂಡವಾಳ ಹಾಕುತ್ತಿದ್ದಾರೆ. ತಿಲಕ್ ಮತ್ತು ಮೇಘನಾ ಗಾಂವ್ಕರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ರಘು ಹಾಸನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಗಾಂಧಿಗಿರಿ' ಸಿನಿಮಾ ಕೊನೆಯ ಹಂತದ ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ. ಶೇಕಡಾ 80ರಷ್ಟು ಶೂಟಿಂಗ್ ಮುಗಿದ್ದು, ಕೆಲವು ದೃಶ್ಯ ಹಾಗೂ ಎರಡು ಹಾಡುಗಳು ಮಾತ್ರ ಉಳಿದಿದೆ. ಜೋಗಿ ಪ್ರೇಮ್ ಈ ಚಿತ್ರದಲ್ಲಿ ನಾಯಕನಾಗಿದ್ದು, ಈ ಸಿನಿಮಾ ಕೆಲಸ ಮತ್ತೆ ಆರಂಭಿಸಲಿದ್ದಾರೆ ರಾಗಿಣಿ.
ರಾಗಿಣಿ ನಟನೆಯ 'ನಾನೇ ನೆಕ್ಸ್ಟ್ ಸಿಎಂ' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮುಸ್ಸಂಜೆ ಮಹೇಶ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಮಾಡಿದ್ದಾರೆ. ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
Recommended Video
ಇದರ ಜೊತೆಗೆ ಸೋಮವಾರ ಪ್ರಮುಖ ವಿಷಯವೊಂದು ಪ್ರಕಟಿಸಲಿದ್ದಾರಂತೆ. ಹೊಸ ಸಿನಿಮಾ ಇರಬಹುದಾ ಎಂಬ ಕುತೂಹಲವೂ ಕಾಡುತ್ತಿದೆ.