Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಗಿಣಿ ಈಸ್ ಬ್ಯಾಕ್: ತುಪ್ಪದ ಹುಡುಗಿ ಕೈಯಲ್ಲಿರುವ ಚಿತ್ರಗಳು ಯಾವುದು?
ಶರಣ್ ಅವರ 'ಅದ್ಯಕ್ಷ ಇನ್ ಅಮೆರಿಕಾ' ಚಿತ್ರದ ಬಳಿಕ ನಟಿ ರಾಗಿಣಿ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. 2020ನೇ ವರ್ಷ ಕೊರೊನಾ ವೈರಸ್ ಕಾಟ ಹಾಗೂ ಡ್ರಗ್ಸ್ ಪ್ರಕರಣ ರಾಗಿಣಿ ಪಾಲಿಗೆ ಕೆಟ್ಟ ಘಳಿಗೆ ಆಗಿತ್ತು.
ಇದೀಗ, ಡ್ರಗ್ಸ್ ಕೇಸ್, ಜೈಲು ವಾಸ ಮುಗಿಸಿ ಬಂದಿರುವ ರಾಗಿಣಿ ಚಿತ್ರರಂಗದಲ್ಲಿ ಮತ್ತೆ ಬ್ಯುಸಿಯಾಗುವ ಸೂಚನೆ ನೀಡಿದ್ದಾರೆ. ಒಪ್ಪಿಕೊಂಡಿರುವ ಚಿತ್ರಗಳನ್ನು ಮಾಡಿಕೊಡಬೇಕು ಎಂಬ ಉದ್ದೇಶದಿಂದ ಮತ್ತೆ ಸಕ್ರಿಯರಾಗಿದ್ದಾರೆ.
ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟ ನಟಿ ರಾಗಿಣಿ: ಕೆಟ್ಟ ಕಾಮೆಂಟ್ ಮಾಡೋರಿಗೆ ಹೇಳಿದ್ದೇನು?
ಇತ್ತೀಚಿಗಷ್ಟೆ ಕರ್ವ 3 ಎಂಬ ಹೊಸ ಸಿನಿಮಾ ಘೋಷಿಸಿದ್ದರು. ವಿಶಾಲ್ ಶೇಖರ್ ಈ ಚಿತ್ರ ನಿರ್ದೇಶನ ಮಾಡುತ್ತಿದ್ದು, ಕೃಷ್ಣ ಚೈತನ್ಯ ಬಂಡವಾಳ ಹಾಕುತ್ತಿದ್ದಾರೆ. ತಿಲಕ್ ಮತ್ತು ಮೇಘನಾ ಗಾಂವ್ಕರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
ರಘು ಹಾಸನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಗಾಂಧಿಗಿರಿ' ಸಿನಿಮಾ ಕೊನೆಯ ಹಂತದ ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ. ಶೇಕಡಾ 80ರಷ್ಟು ಶೂಟಿಂಗ್ ಮುಗಿದ್ದು, ಕೆಲವು ದೃಶ್ಯ ಹಾಗೂ ಎರಡು ಹಾಡುಗಳು ಮಾತ್ರ ಉಳಿದಿದೆ. ಜೋಗಿ ಪ್ರೇಮ್ ಈ ಚಿತ್ರದಲ್ಲಿ ನಾಯಕನಾಗಿದ್ದು, ಈ ಸಿನಿಮಾ ಕೆಲಸ ಮತ್ತೆ ಆರಂಭಿಸಲಿದ್ದಾರೆ ರಾಗಿಣಿ.
ರಾಗಿಣಿ ನಟನೆಯ 'ನಾನೇ ನೆಕ್ಸ್ಟ್ ಸಿಎಂ' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಮುಸ್ಸಂಜೆ ಮಹೇಶ್ ಈ ಚಿತ್ರಕ್ಕೆ ಕಥೆ-ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನಮಾಡಿದ್ದಾರೆ. ಸಂಗೀತ ಮಾಂತ್ರಿಕ ಅರ್ಜುನ್ ಜನ್ಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
Recommended Video
ಇದರ ಜೊತೆಗೆ ಸೋಮವಾರ ಪ್ರಮುಖ ವಿಷಯವೊಂದು ಪ್ರಕಟಿಸಲಿದ್ದಾರಂತೆ. ಹೊಸ ಸಿನಿಮಾ ಇರಬಹುದಾ ಎಂಬ ಕುತೂಹಲವೂ ಕಾಡುತ್ತಿದೆ.