Don't Miss!
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪರಪ್ಪನ ಅಗ್ರಹಾರ ಜೈಲಿಗೆ ರಾಗಿಣಿ ಶಿಫ್ಟ್: ಹೊರಗಿನ ಊಟಕ್ಕೆ ಇಲ್ಲ ಅವಕಾಶ
ಮಾದಕ ದ್ರವ್ಯ ಜಾಲದೊಂದಿಗೆ ನಂಟು ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಗೆ ಇಂದಿನಿಂದ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಗಿಣಿ ದ್ವಿವೇದಿ ಹಾಗೂ ಇನ್ನೂ ನಾಲ್ಕು ಮಂದಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಎಲ್ಲರನ್ನೂ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿದೆ.
14 ದಿನ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಜೈಲಿಗೆ ನಟಿ ರಾಗಿಣಿ
ಪರಪ್ಪನ ಅಗ್ರಹಾರದ ಕ್ವಾರಂಟೈನ್ ಕೇಂದ್ರದಲ್ಲಿ ಆರೋಪಿಗಳು ಇರಲಿದ್ದಾರೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಅವರನ್ನು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
ಹೊರಗಿನಿಂದ ಊಟ ತರಿಸಿಕೊಳ್ಳಲು ಇದ್ದ ಅವಕಾಶಕ್ಕೆ ಕಾರಾಗೃಹ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ಹಾಗಾಗಿ ನಟಿ ರಾಗಿಣಿ, ಜೈಲಿನಲ್ಲಿ ಮಾಡುವ ಅಡುಗೆಯನ್ನೇ ತಿನ್ನಬೇಕಾಗಿದೆ. ಕೊರೊನಾ ಪರಿಸ್ಥಿತಿ ಕಾರಣ ಹೊರಗಿನ ಊಟಕ್ಕೆ ಅವಕಾಶ ನೀಡಲಾಗಿಲ್ಲ.
ರಾಗಿಣಿ ಜೊತೆಗೆ ಇತರೆ ಆರೋಪಿಗಳಾದ ಲೂಮ್ ಪೆಪ್ಪರ್ ಅಲಿಯಾಸ್ ಸೈಮನ್, ಪ್ರಶಾಂತ ರಾಂಕಾ, ರಾಹುಲ್, ನಿಯಜ್ ಅವರುಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಡ್ರಗ್ಸ್ ಪ್ರಕರಣ ಆರೋಪಿ ರಾಹುಲ್ ಅನ್ನು 'ಒಳ್ಳೆ ಹುಡುಗ' ಎಂದ ನಿರ್ಮಾಪಕ ಕೆ.ಮಂಜು
Recommended Video
ಇದೇ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಸಂಜನಾ ಗಲ್ರಾನಿ ಇನ್ನೂ ಮೂರು ದಿನಗಳ ಕಾಲ ಸಿಸಿಬಿ ವಶದಲ್ಲಿಯೇ ಮುಂದುವರೆಯಲಿದ್ದಾರೆ. ರಾಗಿಣಿ ಆಪ್ತ ರವಿಶಂಕರ್, ಪ್ರಕರಣದ ಮುಖ್ಯ ಆರೋಪಿ ವೀರೇನ್ ಖನ್ನಾ ಸಹ ಸಿಸಿಬಿ ವಶದಲ್ಲಿಯೇ ಮುಂದುವರೆಯಲಿದ್ದಾರೆ.