Don't Miss!
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಕ್ಷ್ಯ ನಾಶಕ್ಕೆ ರಾಗಿಣಿ ಮಾಸ್ಟರ್ ಪ್ಲಾನ್: ವಾಟ್ಸಪ್ ಡಿಲೀಟ್ ಮಾಡಿದ ನಟಿ
ಇಂದು (ಸೆಪ್ಟಂಬರ್ 4) ಬೆಳಗ್ಗೆ 6.30ಕ್ಕೆ ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಯಲಹಂಕದಲ್ಲಿರುವ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 2 ಕಾರಿನಲ್ಲಿ ಬಂದಿಳಿದ ಸಿಸಿಬಿ ಅಧಿಕಾರಿಗಳು ರಾಗಿಣಿ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Recommended Video
ಸಿಸಿಬಿ ಅಧಿಕಾರಿಗಳಿಗೆ ರಾಗಿಣಿಯ ಹಲವು ನಡೆ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಾಕ್ಷ್ಯ ನಾಶಕ್ಕೆ ರಾಗಿಣಿ ಮಾಸ್ಟರ್ ಪ್ಲಾನ್ ಮಾಡಿದ್ದಾರಾ ಎನ್ನವ ಶಂಕೆ ವ್ಯಕ್ತವಾಗಿದೆ. ಅನುಮಾನಕ್ಕೆ ಕಾರಣವಾಗಿದ್ದು, ನಟಿ ತನ್ನ ವಾಟ್ಸಪ್ ಅನ್ನು ಡಿಲೀಟ್ ಮಾಡಿರುವುದು. ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಂತೆ ರಾಗಿಣಿ ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ. ಮುಂದೆ ಓದಿ..
ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಿಢೀರ್ ದಾಳಿ
ವಾಟ್ಸಪ್ ಡಿಲೀಟ್ ಮಾಡಿದ ರಾಗಿಣಿ
ನಟಿ ರಾಗಿಣಿ ಆಪ್ತ ರವಿಶಂಕರ್ ವಶಕ್ಕೆ ಪಡೆದ ಬಳಿಕ ನಟಿ ರಾಗಿಣಿ ವಾಟ್ಸಪ್ ಚಾಟ್ ಡಿಲೀಟ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ವಾಟ್ಸಪ್ ಅಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಪ್ ಇನ್ ಸ್ಟಾಲ್ ಮಾಡಿಕೊಂಡಿದ್ದಾರೆ. ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.
ವಿಚಾರಣೆ ತಪ್ಪಿಸಿಕೊಂಡಿದ್ದ ರಾಗಿಣಿ
ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಂತೆ ರಾಗಿಣಿ ಎಸ್ಕೇಪ್ ಆಗಲು ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಸಿಬಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕಿದ ರಾಗಿಣಿ ಹಲವು ಕಾರಣಗಳನ್ನು ನೀಡಿ ತಪ್ಪಿಸಿಕೊಂಡಿದ್ದಾರೆ. ಸೋಮವಾರ ವಿಚಾರಣೆಗೆ ಬರುವುದಾಗಿ ಹೇಳಿ ಟ್ವೀಟ್ ಮಾಡಿದ್ದ ರಾಗಿಣಿಗೆ ಸಿಸಿಬಿ ಮತ್ತೊಂದು ನೋಟಿಸ್ ನೀಡಿ ಇಂದೇ ವಿಚಾರಣೆಗೆ ಹಾಜರಾಗುವಂತೆ ಎಚ್ಚರಿಕೆ ನೀಡಿತ್ತು.
ರಾಗಿಣಿ ಮೊಬೈಲ್ ಮತ್ತು ಲ್ಯಾಪ್ ಟಾಪ್ ವಶಕ್ಕೆ
ಆದರೆ ರಾಗಿಣಿ ನಡೆ ಅನುಮಾನ ಮೂಡಿಸಿದ ಹಿನ್ನಲೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸರ್ಚ್ ವಾರೆಂಟ್ ಪಡೆದು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿ ಬಳಿಕ ಅಧಿಕಾರಿಗಳು ರಾಗಿಣಿಗೆ ಸೇರಿದ 4 ಮೊಬೈಲ್, 2 ಲ್ಯಾಪ್ ಟಾಪ್ ಅನ್ನು ಸೀಜ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ರವಿಶಂಕರ್ ಹೇಳಿಕೆ ಆಧರಿಸಿ ರಾಗಿಣಿ ವಿಚಾರಣೆ
ಸದ್ಯ ಶೋಧ ಕಾರ್ಯ ಮುಗಿಸಿರುವ ಅಧಿಕಾರಿಗಳು ರಾಗಿಣಿಗೆ ಅನೇಕ ಪ್ರಶ್ನೆ ಮಾಡುತ್ತಿದ್ದಾರೆ. ಬಳಿಕ ರಾಗಿಣಿಯನ್ನು ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ರಾಗಿಣಿ ಆಪ್ತ ರವಿಶಂಕರ್ ಸಿಸಿಬಿ ವಶದಲ್ಲಿದ್ದು, ಮಹತ್ವದ ಮಾಹಿತಿಯನ್ನು ಹೊರಹಾಕಿದ್ದಾರೆ. ರವಿಶಂಕರ್ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ರಾಗಿಣಿ ಮನೆ ಮೇಲೆ ದಾಳಿ ನಡೆಸಿದ್ದಾರೆ.