Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಡಿಎಸ್ ಪಕ್ಷಕ್ಕೆ ನಟಿ ರಕ್ಷಿತಾ ಅಧಿಕೃತ ಸೇರ್ಪಡೆ
ಕನ್ನಡ ಚಿತ್ರರಂಗದ ತಾರೆ ಹಾಗೂ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕಿ ರಕ್ಷಿತಾ ಅವರು ಸೋಮವಾರ (ಏ.15) ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಅವರನ್ನು ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಜೆಡಿಎಸ್ ಪಕ್ಷಕ್ಕೆ ಪಾದಾರ್ಪಣೆ ಮಾಡಿರುವ ರಕ್ಷಿತಾ ಅವರು ಮಾತನಾಡುತ್ತಾ, "ಯಾವುದೇ ಷರತ್ತು ಇಲ್ಲದೆ ಸೇರ್ಪಡೆಯಾಗಿದ್ದೇನೆ. ನಾನು ಜೆಡಿಎಸ್ ಟಿಕೆಟ್ ಬಯಸಿ ಇಲ್ಲಿಗೆ ಬಂದಿಲ್ಲ. ಪಕ್ಷಕ್ಕಾಗಿ ದುಡುಯುತ್ತೇನೆ" ಎಂದಿದ್ದಾರೆ.
ರಕ್ಷಿತಾ ಇತ್ತೀಚೆಗೆ ಜೆಡಿ(ಎಸ್) ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗುವ ಸಂಬಂಧ ಚರ್ಚೆ ನಡೆಸಿದ್ದರು. ಇಂದು ಅವರು ಎಚ್.ಡಿ. ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡುವ ಮೂಲಕ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಪೂಜಾಗಾಂಧಿ ಅವರು ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಅಡಿಯಿಟ್ಟ ಘಳಿಗೆಯಿಂದಲೇ ರಕ್ಷಿತಾ ಹೊರಬೀಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈಗದು ನಿಜವಾಗಿದೆ. ಇತ್ತೀಚೆಗೆ ಅವರು ಬಿಜೆಪಿ ಸೇರುವ ಸಂಬಂಧ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಯನ್ನು ನಮ್ಮ ಓದುಗರು ಮರೆತಿರಲಾರರು.
ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ತೊರೆಯಲಿರುವ ರಕ್ಷಿತಾ ಅವರು ಯಾವುದೇ ಪಕ್ಷಕ್ಕೂ ಸೇರದೆ ರಾಜಕೀಯ ಸನ್ಯಾಸವನ್ನು ಸ್ವೀಕರಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಅವರು ಜೆಡಿಎಸ್ ಸೇರುವ ಮೂಲಕ ಎಲ್ಲ ಅನುಮಾನಗಳಿಗೂ ಫುಲ್ ಸ್ಟಾಪ್ ಹಾಕಿದ್ದಾರೆ.
ತಮ್ಮ ಗ್ಲಾಮರ್ ಹಾಗೂ ಭಾಷಣಗಳ ಮೂಲಕ ಮತದಾರರನ್ನು ತಕ್ಕಮಟ್ಟಿಗೆ ಸೆಳೆದಿದ್ದ ರಕ್ಷಿತಾ ಅವರಿಗೆ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಚಾಮರಾಜನಗರದಲ್ಲಿ ಟಿಕೆಟ್ ಕೊಟ್ಟಿತ್ತು. ಈಗ ಜೆಡಿಎಸ್ ಸೇರಿವುದರಿಂದ ಅವರಿಗೆ ಇನ್ಯಾವ ಕ್ಷೇತ್ರದಲ್ಲಿ ಟಿಕೆಟ್ ಸಿಗುತ್ತದೋ ಕಾದುನೋಡಬೇಕು. (ಒನ್ಇಂಡಿಯಾ ಕನ್ನಡ)