Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೈಲಿನಲ್ಲೇ ವಿಜಯದಶಮಿ ಹಬ್ಬ ಆಚರಿಸಿದ ಸಂಜನಾ ಗಲ್ರಾನಿ ಮತ್ತು ರಾಗಿಣಿ
ನಾಡಿನಾದ್ಯಂತ ದಸರಾ ಹಬ್ಬದವನ್ನು ಸಂಭ್ರಮ, ಸಡಗರದಿಂದ ಆಚರಣೆ ಮಾಡಲಾಗುತ್ತಿದೆ. ಚಿತ್ರರಂಗ ಸಹ ಹಬ್ಬದ ಸಂಭ್ರಮದಲ್ಲಿದೆ. ಆದರೆ ಸ್ಯಾಂಡಲ್ ವುಡ್ ನ ಇಬ್ಬರು ನಟಿಯರು ಮಾತ್ರ ಜೈಲಿನಲ್ಲೇ ಕಾಲಕಳೆಯುವಂತಾಗಿದೆ. ಹೌದು, ಡ್ರಗ್ಸ್ ಜಾಲದ ಸಂಬಂಧ ಹರಪ್ಪನ ಅಗ್ರಹಾರ ಜೈಲು ಸೇರಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಗಲ್ರಾನಿ ಇಬ್ಬರು ಜೈಲಿನಲ್ಲೇ ಈ ಬಾರಿ ದಸರಾ ಹಬ್ಬ ಆಚರಣೆ ಮಾಡಿದ್ದಾರೆ.
ಸುಮಾರು ತಿಂಗಳಿಗೂ ಹೆಚ್ಚು ಸಮಯದಿಂದ ಜೈಲುವಾಸ ಅನುಭವಿಸುತ್ತಿರುವ ನಟಿ ಸಂಜನಾ ಮತ್ತು ರಾಗಿಣಿ ಜಾಮೀನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ವಿಜಯದಶಮಿ ಹಬ್ಬದ ಸಮಯದಲ್ಲಾದರೂ ಜಾಮೀನು ಪಡೆದು ಮನೆಯಲ್ಲಿ ಹಬ್ಬ ಆಚರಣೆ ಮಾಡಬಹುದು ಎಂದುಕೊಂಡಿದ್ದ ನಟಿಯರ ಕನಸು ನನಸಾಗಿಲ್ಲ. ಹಾಗಾಗಿ ಜೈಲಿನಲ್ಲೇ ಹಬ್ಬ ಆಚರಣೆ ಮಾಡಬೇಕಾಗಿದೆ.
ಸಂಜನಾ-ರಾಗಿಣಿ ಗೆ ಜಾಮೀನು ನೀಡುವಂತೆ ಬೆದರಿಕೆ ಪತ್ರ ಬರೆದವನ ಬಂಧನ
ಮೂಲಗಳ ಪ್ರಕಾರ ನಟಿಯರಿಬ್ಬರು ಜೈಲಿನಲ್ಲೇ ಇರುವ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಿ ಹಬ್ಬ ಮಾಡಿದ್ದಾರಂತೆ. ಜೊತೆಗೆ ಆಯುಧ ಪೂಜೆಯಲ್ಲೂ ಪಾಲ್ಗೊಂಡಿದ್ದಾರೆ. ಹಬ್ಬದ ದಿನ ನೀಡುವ ವಿಶೇಷ ಒಬ್ಬಟ್ಟಿನ ಊಟವನ್ನು ಸವಿದಿದ್ದಾರೆ. ಪ್ರತೀವರ್ಷ ಮನೆಯಲ್ಲಿ ಅದ್ದೂರಿಯಾಗಿ ಹಬ್ಬ ಆಚರಣೆ ಮಾಡುತ್ತಿದ್ದ ನಟಿಯರು ಈ ವರ್ಷ ಜೈಲಿನಲ್ಲಿ ಇರುವಂತೆ ಆಗಿದೆ.
Recommended Video
ನಟಿ ರಾಗಿಣಿಯನ್ನು ಸೆಪ್ಟಂಬರ್ 4ರಂದು ಬಂಧಿಸಲಾಗಿದೆ. ಸೆಪ್ಟಂಬರ್ 8ರಂದು ನಟಿ ಸಂಜನಾ ಅವರನ್ನು ಬಂಧಿಸಲಾಗಿದೆ. ಇಬ್ಬರೂ ನಟಿಯರ ಜಾಮೀನು ಅರ್ಜಿ ಮುಂದಕ್ಕೆ ಹೋಗುತ್ತಲೆ ಇದೆ. ಕೊನೆಯಪಕ್ಷ ದೀಪಾವಳಿ ಹಬ್ಬಕ್ಕಾದರೂ ಜಾಮೀನು ಸಿಗಬಹುದಾ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ದೀಪಾಳಿಯನ್ನಾದರೂ ಕುಟುಂಬದ ಅದ್ದೂರಿಯಾಗಿ ಆಚರಿಸುತ್ತಾರಾ ಎಂದು ಕಾದುನೋಡಬೇಕು.