Don't Miss!
- News ಚುನಾವಣೆ ಹೊತ್ತಲ್ಲೇ ಎದುರಾಗಿದ್ದ ಸಂಕಷ್ಟದಿಂದ ಸಂಸದ ರಾಘವೇಂದ್ರಗೆ ಬಿಗ್ ರಿಲೀಫ್
- Technology ಅಧಿಕ ಬ್ಯಾಟರಿ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!..ಆಫರ್ ತಿಳಿದ್ರೆ, ವಾವ್ ಅಂತೀರಾ!
- Automobiles ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- Finance ರಿಲಯನ್ಸ್ ಪವರ್ ಕಂಪೆನಿಯಲ್ಲಿ ಅನಿಲ್ ಅಂಬಾನಿಯ ಜೆಎಸ್ಡಬ್ಲ್ಯುನಿಂದ 132 ಕೋಟಿ ರೂ.ಗಳ ಹೂಡಿಕೆ
- Sports ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್ಗೆ ಆಯ್ಕೆಯಾಗಬಾರದು; ಇರ್ಫಾನ್ ಪಠಾಣ್ ಹೀಗೆ ಹೇಳಿದ್ದೇಕೆ?
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಟುಂಬದ ಜೊತೆಗೆ ಶಬರಿಮಲೆಗೆ ಹೋಗುತ್ತೇನೆ ಎಂದ ಸಂಜನಾ
Recommended Video
''ಮಹಿಳೆಯರು ಕೂಡ ಶಬರಿಮಲೆಗೆ ಹೋಗಬಹುದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬಹುದು, ಒಬ್ಬ ಮಹಿಳೆಯ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಯಾರು ಕಿತ್ತುಕೊಳ್ಳಬಾರದು'' ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ತೀರ್ಪನ್ನು ಸ್ವಾಗತ ಮಾಡಿರುವ ನಟಿ ಸಂಜನಾ ಅದರ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಫಿಲ್ಮಿಬೀಟ್ ಕನ್ನಡ ಜೊತೆಗೆ ಮಾತನಾಡಿರುವ ಅವರು ''ನಾನು ಕೂಡ ನಮ್ಮ ಕುಟುಂಬ ಜೊತೆಗೆ ಶಬರಿಮಲೆಗೆ ಹೋಗುತ್ತೇನೆ'' ಎಂದಿದ್ದಾರೆ.
ಶಬರಿಮಲೆ ತೀರ್ಪು LIVE: ಸುಪ್ರೀಂನಿಂದ ಮತ್ತೊಂದು ಐತಿಹಾಸಿಕ ತೀರ್ಪು
''ನಾನು ಚಿಕ್ಕ ವಯಸ್ಸಿನಲ್ಲಿ ಇರುವಾಗ ಯಾರೂ ನನ್ನನ್ನು ಶಬರಿಮಲೆಗೆ ಕರೆದುಕೊಂಡು ಹೋಗಿರಲಿಲ್ಲ. ನಾನು ಧರ್ಮಸ್ಥಳ, ತಿರುಪತಿ, ಶಿರಡಿ ಹೀಗೆ ಎಲ್ಲ ಕಡೆ ತೆರಳಿದ್ದೇನೆ. ಆದರೆ, ನಮಗೆ ಶಬರಿಮಲೆಗೆ ಹೋಗಲು ಅವಕಾಶ ಇರಲಿಲ್ಲ. ಈಗ ತೀರ್ಪು ಬಂದ ಬಳಿಕ ನಾನು ಖಂಡಿತ ನನ್ನ ಕುಟುಂಬ ಜೊತೆಗೆ ಶಬರಿಮಲೆಗೆ ಹೋಗುತ್ತೇನೆ.'' ಎಂದು ಸಂಜನಾ ಪ್ರತಿಕ್ರಿಯೆ ನೀಡಿದ್ದಾರೆ.
ಅಂದಹಾಗೆ, ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ, ಸುಪ್ರೀಂ ಕೋರ್ಟ್ ಮಹತ್ವದ ಇಂದು ತೀರ್ಪು ನೀಡಿದೆ.
ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ ತೀರ್ಪು: ಸಚಿವೆ ಜಯಮಾಲಾ ಸ್ವಾಗತ
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬು ವಾದವಾಗಿತ್ತು. ಆದರೆ, ಇದು ಒಬ್ಬ ಮಹಿಳೆಯ ಧಾರ್ಮಿಕ ಸ್ವಾತಂತ್ರ್ಯದ ದಕ್ಕೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.