ಬೆಳ್ಳಿತೆರೆಗೆ ಮಾಜಿ ಹೀರೋಯಿನ್ ಸರಿತಾ ಪುತ್ರ

ಚೆನ್ನೈನ ಪ್ರತಿಷ್ಠಿತ ಎವಿಎಂ ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಪ್ರತಿಭಾನ್ವಿತ ನಿರ್ದೇಶಕ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕೆ ಬಾಲಚಂದರ್ ಅವರು ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಲಾಯಿತು.
ತೆಲುಗಿನ 'ಮರೋ ಚರಿತ್ರ'ದ ಮೂಲಕ ಬಣ್ಣದ ಲೋಕಕ್ಕೆ ಅಡಿಯಿಟ್ಟ ಸರಿತಾ ಅವರು ಒಂದು ಕಾಲದಲ್ಲಿ ಕನ್ನಡದ ಬಹು ಬೇಡಿಕೆಯ ನಟಿಯಾಗಿದ್ದರು. ಮಲಯಾಳಂ ನಟ ಮುಖೇಶ್ ಬಾಬು ಅವರನ್ನು ಮದುವೆಯಾದ ನಂತರ ಚಿತ್ರರಂಗದ ಜತೆಗಿನ ಸಂಪರ್ಕವನ್ನು ಬಹುತೇಕ ಕಡಿದುಕೊಂಡಿದ್ದರು.
2009ರಲ್ಲಿ ವಿವಾಹ ವಿಚ್ಛೇದನ ಪಡೆಯುವ ಮೂಲಕ ಮುಖೇಶ್ ಜತೆಗಿನ 18 ವರ್ಷಗಳ ದಾಂಪತ್ಯ ಜೀವನಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು. ಸರಿತಾ ಅವರಿಗೆ ಇಬ್ಬರು ಗಂಡು ಮಕ್ಕಳು. ಅವರಲ್ಲಿ ಹಿರಿ ಮಗ ನಿತಿನ್ ಕಣ್ಣನ್ ಈಗ ನಾಯಕ ನಟನಾಗಿದ್ದಾರೆ.
ಎಂಬತ್ತರ ದಶಕದಲ್ಲಿ ಕನ್ನಡದ ಮನೆಮಾತಾಗಿದ್ದ ಸರಿತಾ ಅವರು ವಿದೇಶದಲ್ಲಿ ಸೆಟ್ಲ್ ಆಗಿದ್ದರು. ತೀರಾ ಇತ್ತೀಚೆಗೆ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರ ದಶಮುಖ ಚಿತ್ರದಲ್ಲಿ ಮತ್ತೆ ಬಣ್ಣ ಹಚ್ಚಿಕೊಂಡಿದ್ದರು. ಗುರುತೇ ಸಿಗದಷ್ಟು ಡುಮ್ಮಿಯಂತಾಗಿರುವ ಸರಿತಾ ಅವರು ಲೇಡಿ ವಿಲನ್ ಆಗಿಯೂ ತೆಲುಗು ಚಿತ್ರಗಳಿಗೆ ಅಡಿಯಿಟ್ಟಿದ್ದರು. (ಒನ್ಇಂಡಿಯಾ ಕನ್ನಡ)


Click it and Unblock the Notifications











