Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾದಲ್ಲಿ ಗೆಲ್ಲದಿದ್ದರೇನಂತೆ, ಸಿಸಿಎಲ್ ರಾಯಭಾರಿ ಆಗಿಲ್ವಾ?
'ಕಣ್ ಕಣ್ಣ ಸಲಿಗೆ' ಅಂತ ನಟ ಧರ್ಮ ಕೀರ್ತಿರಾಜ್ ಅವರ ಜೊತೆ ಡ್ಯುಯೆಟ್ ಹಾಡಿದ್ದ ನಟಿ ಶರ್ಮಿಳಾ ಮಾಂಡ್ರೆ ಮತ್ತೆ 'ಮುಮ್ತಾಜ್' ಚಿತ್ರದಲ್ಲಿ ಅದೇ ಧರ್ಮ ಅವರ ಜೊತೆ ನಟಿಸಿದ್ದರು.
ಆಮೇಲೆ ಚಂದನವನದ ತೆರೆಯ ಮೇಲೆ ಪತ್ತೆಯೇ ಇಲ್ಲದ ಮಾಂಡ್ರೆ ಇದೀಗ ದಿಢೀರ್ ಅಂತ ಸಿ.ಸಿ.ಎಲ್ ಕರ್ನಾಟಕ ಬುಲ್ಡೋಜರ್ ತಂಡದ ರಾಯಭಾರಿಯಾಗುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.[ಸಿಸಿಎಲ್ ಮ್ಯಾಚ್ ನಿಂದ ಕಿಚ್ಚ ಅವರಿಗೆ ಸಿಗುವ ಸಂಭಾವನೆ ಎಷ್ಟು]
ಇನ್ನು ಶರ್ಮಿಳಾ ಅವರದೇ ಸಾಲಿಗೆ ಸೇರ್ಪಡೆಗೊಳ್ಳುವ ಮತ್ತೋರ್ವ ನಟಿ ಪಾರ್ವತಿ ನಾಯರ್. ಹೌದು ಈ ಇಬ್ಬರು ನಟಿ-ಮಣಿಯರು ಇದೀಗ ಸಿ.ಸಿ.ಎಲ್ ನ ಪ್ರಚಾರ ರಾಯಭಾರಿಗಳಾಗಿದ್ದು, ಕರ್ನಾಟಕ ಬುಲ್ಡೋಜರ್ಸ್ ತಂಡದವರನ್ನು ಹುರಿದುಂಬಿಸುವ ಕೆಲಸ ಮಾಡಲಿದ್ದಾರೆ.
ನಟಿ ಪಾರ್ವತಿ ನಾಯರ್ ಅವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಿಂಚಿದ್ದು, ಆಯ್ತು ತದನಂತರ ಕನ್ನಡದಲ್ಲಿ ನಟ ಕಿಶೋರ್ ಅವರ ಜೊತೆ 'ವಾಸ್ಕೋಡಿಗಾಮ' ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ಆದರೂ ನಟಿಗೆ ಯಾಕೋ ಅದೃಷ್ಟ ಒಲಿಯಲಿಲ್ಲ.
ಅಂದಹಾಗೆ ಸಿನಿಮಾ ಮಾಡಿ ಗುರುತಿಸಿಕೊಳ್ಳದಿದ್ದರೆ ಏನಂತೆ ಇದೀಗ ಸಿ.ಸಿ.ಎಲ್ ಮೂಲಕ ಗುರುತಿಸಿಕೊಂಡು ಮುಂದಿನ ದಿನಗಳಲ್ಲಿ ಇಬ್ಬರು ಒಳ್ಳೆ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರಾ ಅಂತ ಕಾದು ನೋಡಬೇಕಿದೆ.