ನಟಿ ಶ್ರುತಿಗೆ ಹೊಸ ಜವಾಬ್ದಾರಿ ಕೊಟ್ಟ ರಾಜ್ಯ ಸರ್ಕಾರ

ಕನ್ನಡ ಚಲನಚಿತ್ರ ನಟಿ ಶ್ರುತಿ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಶನಿವಾರ (ಜುಲೈ 17) ಸಿಎಂ ಕಚೇರಿ ಅಧಿಕೃತ ಆದೇಶರ ಹೊರಡಿಸಿ ಶ್ರುತಿ ಬದಲಿಗೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಲಾಗಿತ್ತು.

ಇದೀಗ, ನಟಿ ಶ್ರುತಿಗೆ ರಾಜ್ಯ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ಸೋಮವಾರ (ಜುಲೈ 19) ಈ ಕುರಿತು ಸರ್ಕಾರದ ಮುಖ್ಯ ಕಾಯದರ್ಶಿಗಳು ಈ ಆದೇಶ ಹೊರಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಸೋಮವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಇದೇ ದಿನ ನೂತನ ಆದೇಶ ಹೊರಬಂದಿರುವುದು ಗಮನಾರ್ಹ.

Karnataka Govt Appoints Actress Shruti as Chairman of the Alcohol Restraint Board

ಭಜರಂಗಿ 2 ಸಿನಿಮಾದಲ್ಲಿ ಶ್ರುತಿ

ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಮುಂದುವರಿಯುತ್ತಿರುವ ಶ್ರುತಿ, ಕೊನೆಯದಾಗಿ ಮಂಸೋರೆ ನಿರ್ದೇಶನ ಆಕ್ಟ್ 1978 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ತೆರೆಗೆ ಬರಬೇಕಿದೆ. ಇದರ ಜೊತೆ ಮತ್ತೆರಡು ಹೊಸ ಪ್ರಾಜೆಕ್ಟ್ ಗೂ ಸಹಿ ಹಾಕಿದ್ದಾರೆ. ಕೊವಿಡ್‌ ಕಾರಣದಿಂದ ಆ ಸಿನಿಮಾಗಳು ಇನ್ನು ಶುರುವಾಗಿಲ್ಲ.

Recommended Video

ಓದಿದ್ರೆ ಈ ಮಟ್ಟಕ್ಕೆ ಹೆಸರು ಮಾಡೋಕೆ ಆಗ್ತಾ ಇರ್ಲಿಲ್ಲ ಅನ್ಸುತ್ತೆ | Umesh Kinnal Comedy Khiladigalu Journey

More from Filmibeat

English summary
Karnataka Govt Appoints Actress Shruti as Chairman of the Alcohol Restraint Board.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X