Don't Miss!
- News
ಕೂರ್ಮಗಿರಿ ಎಲ್ಲೋಡು ಆದಿನಾರಾಯಣಸ್ವಾಮಿ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ
- Technology
ಸ್ಮಾರ್ಟ್ಫೋನ್ಗಳಲ್ಲಿನ ಸೆನ್ಸರ್ಗಳ ಬಗ್ಗೆ ನಿಮಗೆ ಗೊತ್ತಾ?..ಇವುಗಳಿಂದ ಲಾಭವೇನು?
- Automobiles
ಭಾರತದಲ್ಲಿ ಗ್ಲಾಂಝಾ ಪ್ರೀಮಿಯಂ ಹ್ಯಾಚ್ಬ್ಯಾಕ್ನ ಬೆಲೆ ಹೆಚ್ಚಿಸಿದ ಟೊಯೊಟಾ
- Sports
Border-Gavaskar Trophy: ಭಾರತ vs ಆಸ್ಟ್ರೇಲಿಯಾ ಅತಿ ಹೆಚ್ಚು ರನ್, ಹೆಚ್ಚು ವಿಕೆಟ್ ಗಳಿಸಿದ ಆಟಗಾರರ ಪಟ್ಟಿ
- Finance
Real Estate Deal: ದೇಶದ ಅತೀ ದೊಡ್ಡ ರಿಯಲ್ ಎಸ್ಟೇಟ್ ಡೀಲ್ಗೆ ಹೂಡಿಕೆ ಮಾಡಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle
ಕ್ಯಾನ್ಸರ್ ಚಿಕಿತ್ಸೆ ಬಳಿಕ ಮಗು ಪಡೆಯಲು ಸುರಕ್ಷಿತ ವಿಧಾನ ಇದೇ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಟಿ ಶ್ರುತಿಗೆ ಹೊಸ ಜವಾಬ್ದಾರಿ ಕೊಟ್ಟ ರಾಜ್ಯ ಸರ್ಕಾರ
ಕನ್ನಡ ಚಲನಚಿತ್ರ ನಟಿ ಶ್ರುತಿ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿತ್ತು. ಶನಿವಾರ (ಜುಲೈ 17) ಸಿಎಂ ಕಚೇರಿ ಅಧಿಕೃತ ಆದೇಶರ ಹೊರಡಿಸಿ ಶ್ರುತಿ ಬದಲಿಗೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಿಸಲಾಗಿತ್ತು.
ಇದೀಗ, ನಟಿ ಶ್ರುತಿಗೆ ರಾಜ್ಯ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ನೂತನ ಅಧ್ಯಕ್ಷರಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಶ್ರುತಿ
ಸಿನಿಮಾ
ಜೀವನದಲ್ಲಿ
ಆ
ಒಂದು
ಕೊರಗು
ಈಗಲೂ
ಕಾಡ್ತಿದೆ!
ಸೋಮವಾರ (ಜುಲೈ 19) ಈ ಕುರಿತು ಸರ್ಕಾರದ ಮುಖ್ಯ ಕಾಯದರ್ಶಿಗಳು ಈ ಆದೇಶ ಹೊರಡಿಸಿದ್ದಾರೆ. ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಸೋಮವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ್ದರು. ಇದೇ ದಿನ ನೂತನ ಆದೇಶ ಹೊರಬಂದಿರುವುದು ಗಮನಾರ್ಹ.
ಭಜರಂಗಿ 2 ಸಿನಿಮಾದಲ್ಲಿ ಶ್ರುತಿ
Recommended Video
ಸಿನಿಮಾ ಮತ್ತು ರಾಜಕೀಯ ಎರಡರಲ್ಲೂ ಮುಂದುವರಿಯುತ್ತಿರುವ ಶ್ರುತಿ, ಕೊನೆಯದಾಗಿ ಮಂಸೋರೆ ನಿರ್ದೇಶನ ಆಕ್ಟ್ 1978 ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಶಿವರಾಜ್ ಕುಮಾರ್ ನಟನೆಯ ಭಜರಂಗಿ 2 ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ತೆರೆಗೆ ಬರಬೇಕಿದೆ. ಇದರ ಜೊತೆ ಮತ್ತೆರಡು ಹೊಸ ಪ್ರಾಜೆಕ್ಟ್ ಗೂ ಸಹಿ ಹಾಕಿದ್ದಾರೆ. ಕೊವಿಡ್ ಕಾರಣದಿಂದ ಆ ಸಿನಿಮಾಗಳು ಇನ್ನು ಶುರುವಾಗಿಲ್ಲ.