Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಜೊತೆ ಹೆಜ್ಜೆ ಹಾಕಲಿರುವ ನಟಿ ಶ್ರುತಿ
ಗುರುವಾರ (ಫೆ.7)ಯಡಿಯೂರಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಶ್ರುತಿ ಅವರು ಪಾಲ್ಗೊಳ್ಳುವ ಮೂಲಕ ಕೆಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಕಾವೇರಿಗಾಗಿ ಯಡಿಯೂರಪ್ಪ ಪಕ್ಷಾತೀತ ಹೋರಾಟ ಹಮ್ಮಿಕೊಂಡಿದ್ದು, ಮೈಸೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆಗೆ ಮುಂದಾಗಿರುವುದು ಗೊತ್ತೇ ಇದೆ.
ಶ್ರುತಿ ಅವರು ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದರು. ಇದೆಲ್ಲದರ ಫಲವಾಗಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯನ್ನಾಗಿ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ನಿರ್ದೇಶಕ ಎಸ್ ಮಹೇಂದರ್ ಅವರೊಂದಿಗೆ ವೈವಾಹಿಕ ಬಿಕ್ಕಟ್ಟುಗಳು ಬಹಿರಂಗವಾದವು. ವಿಚ್ಛೇದನ ನೀಡುವ ಮೂಲಕ ಅವರಿಂದ ಬೇರ್ಪಟ್ಟರು. ಇಷ್ಟೆಲ್ಲಾ ಬೆಳವಣಿಗೆಗಳ ನಂತರ ಶ್ರುತಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದಿಂದ ಕೈಬಿಡಲಾಯಿತು.
ಬಳಿಕ ಅವರು ಚಿತ್ರಗಳಲ್ಲೂ ಅಷ್ಟಾಗಿ ಕಾಣಿಸಿಕೊಳ್ಳಲಿಲ್ಲ. ರಾಜಕೀಯದಿಂದಲೂ ದೂರ ಉಳಿದರು. ಈಗ ಕೆಜೆಪಿ ಪಕ್ಷದ ಕಡೆಗೆ ವಾಲುವ ಮೂಲಕ ಎರಡನೇ ಇನ್ನಿಂಗ್ಸ್ ಗೆ ರೆಡಿಯಾಗುತ್ತಿದ್ದಾರೆ.
ಅತ್ತ ಅವರ ಮಾಜಿ ಪತಿ ಎಸ್ ಮಹೇಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಒಂದು ಕಾಲದಲ್ಲಿ ಇಬ್ಬರೂ ಬಿಜೆಪಿ ಪಕ್ಷಕ್ಕೆ ಮಣ್ಣು ಹೊತ್ತಿದ್ದರು. ಈಗ ಇಬ್ಬರೂ ಬೇರೆ ಬೇರೆಯಾಗಿದ್ದು ಬೇರೆ ಬೇರೆ ಪಕ್ಷಗಳಲ್ಲಿ ತೊಡಗಿಕೊಂಡಿದ್ದಾರೆ. (ಒನ್ಇಂಡಿಯಾ ಕನ್ನಡ)