twitter
    For Quick Alerts
    ALLOW NOTIFICATIONS  
    For Daily Alerts

    ಯಡಿಯೂರಪ್ಪ ಜೊತೆ ಹೆಜ್ಜೆ ಹಾಕಲಿರುವ ನಟಿ ಶ್ರುತಿ

    By Rajendra
    |

    Actress Shruti
    ವೈವಾಹಿಕ ಬದುಕು ಬಿಕ್ಕಟ್ಟುಗಳ ನಡುವೆ ಕಳೆದುಹೋಗಿದ್ದ ಕನ್ನಡ ಚಿತ್ರನಟಿ ಶ್ರುತಿ ಅವರು ಈಗ ಮತ್ತೆ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೆಜೆಪಿ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ.

    ಗುರುವಾರ (ಫೆ.7)ಯಡಿಯೂರಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಶ್ರುತಿ ಅವರು ಪಾಲ್ಗೊಳ್ಳುವ ಮೂಲಕ ಕೆಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಕಾವೇರಿಗಾಗಿ ಯಡಿಯೂರಪ್ಪ ಪಕ್ಷಾತೀತ ಹೋರಾಟ ಹಮ್ಮಿಕೊಂಡಿದ್ದು, ಮೈಸೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆಗೆ ಮುಂದಾಗಿರುವುದು ಗೊತ್ತೇ ಇದೆ.

    ಶ್ರುತಿ ಅವರು ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದರು. ಇದೆಲ್ಲದರ ಫಲವಾಗಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆಯನ್ನಾಗಿ ಮಾಡಲಾಗಿತ್ತು.

    ಇದೇ ಸಂದರ್ಭದಲ್ಲಿ ನಿರ್ದೇಶಕ ಎಸ್ ಮಹೇಂದರ್ ಅವರೊಂದಿಗೆ ವೈವಾಹಿಕ ಬಿಕ್ಕಟ್ಟುಗಳು ಬಹಿರಂಗವಾದವು. ವಿಚ್ಛೇದನ ನೀಡುವ ಮೂಲಕ ಅವರಿಂದ ಬೇರ್ಪಟ್ಟರು. ಇಷ್ಟೆಲ್ಲಾ ಬೆಳವಣಿಗೆಗಳ ನಂತರ ಶ್ರುತಿ ಅವರನ್ನು ಮಹಿಳಾ ಅಭಿವೃದ್ಧಿ ನಿಗಮದಿಂದ ಕೈಬಿಡಲಾಯಿತು.

    ಬಳಿಕ ಅವರು ಚಿತ್ರಗಳಲ್ಲೂ ಅಷ್ಟಾಗಿ ಕಾಣಿಸಿಕೊಳ್ಳಲಿಲ್ಲ. ರಾಜಕೀಯದಿಂದಲೂ ದೂರ ಉಳಿದರು. ಈಗ ಕೆಜೆಪಿ ಪಕ್ಷದ ಕಡೆಗೆ ವಾಲುವ ಮೂಲಕ ಎರಡನೇ ಇನ್ನಿಂಗ್ಸ್ ಗೆ ರೆಡಿಯಾಗುತ್ತಿದ್ದಾರೆ.

    ಅತ್ತ ಅವರ ಮಾಜಿ ಪತಿ ಎಸ್ ಮಹೇಂದರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಒಂದು ಕಾಲದಲ್ಲಿ ಇಬ್ಬರೂ ಬಿಜೆಪಿ ಪಕ್ಷಕ್ಕೆ ಮಣ್ಣು ಹೊತ್ತಿದ್ದರು. ಈಗ ಇಬ್ಬರೂ ಬೇರೆ ಬೇರೆಯಾಗಿದ್ದು ಬೇರೆ ಬೇರೆ ಪಕ್ಷಗಳಲ್ಲಿ ತೊಡಗಿಕೊಂಡಿದ್ದಾರೆ. (ಒನ್ಇಂಡಿಯಾ ಕನ್ನಡ)

    English summary
    Kannada actor Shruti is planning to join the KJP and play a key role in Karnataka politics. The actress may join the party on 7th Feb in Yeddyurappa's padayatra programme from Mysore to Bangalore.
    Wednesday, February 6, 2013, 18:33
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X