Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ : ಸಿಂಧು ಮೆನನ್
ಕನ್ನಡ ಸಿನಿಮಾ ತಾರೆ ಸಿಂಧು ಮೆನನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿ ಸಿನಿಮಾ ಪ್ರಿಯರನ್ನು ಹಾಗೂ ಅಭಿಮಾನಿಗಳನ್ನು ಕೆಲಕಾಲ ತಲ್ಲಣಗೊಳಿಸಿತು. ಆದರೆ ಈ ಸ್ವತಃ ಸಿಂಧು ಮೆನನ್ ಅವರು ತಾವು ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ತಮ್ಮ ಅಭಿಮಾನಿಗಳು ನಿಟ್ಟುಸಿರು ಬಿಡುವಂತಾಯಿತು.
ಪ್ರಸ್ತುತ ಅವರು ಲಂಡನ್ ನಲ್ಲಿದ್ದು ಅಲ್ಲಿಂದಲೇ ಮಾಧ್ಯಮಗಳಿಗೆ ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. "ನಾನು ಆತ್ಮಹತ್ಯೆಗೆ ಯತ್ನಿಸಿಲ್ಲ. ಲಂಡನ್ ನಲ್ಲಿ ಸುರಕ್ಷಿತವಾಗಿದ್ದೇನೆ. ತಾನು ಆತ್ಮಹತ್ಯೆಗೆ ಶರಣಾಗುವಷ್ಟು ಅಧೀರಳಲ್ಲ" ಎಂದಿದ್ದಾರೆ.
ಸಾಫ್ಟ್ ವೇರ್ ಇಂಜಿನಿಯರ್ ಪ್ರಭು ಅವರನ್ನು ವರಿಸಿದ ಬಳಿಕ ಸಿಂಧು ಮೆನನ್ ಅವರು ಬೆಂಗಳೂರಿನಲ್ಲೇ ನೆಲೆಸಿದ್ದಾರೆ. ಪ್ರಸ್ತುತ ಅವರು ಲಂಡನ್ ನಲ್ಲಿರುವುದಾಗಿ ತಿಳಿಸಿದ್ದಾರೆ. ಆದರೆ ತೆಲುಗು ಮಾಧ್ಯಗಳಲ್ಲಿ ಸಿಂಧು ಅವರು ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು ಎಂಬ ಸುದ್ದಿ ಅವರ ಅಭಿಮಾನಿಗಳನ್ನು ದಂಗುಬಡಿಸಿತ್ತು.
ಸಿಂಧು ಮೆನನ್ ಅವರು ಕನ್ನಡದ ರಶ್ಮಿ, ಪ್ರೇಮ ಪ್ರೇಮ ಪ್ರೇಮ, ನಂದಿ, ಖುಷಿ, ಧರ್ಮ, ಜ್ಯೇಷ್ಠ, ಯಾರೇ ನೀ ಹುಡುಗಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಒಟ್ಟಿನಲ್ಲಿ ಅವರು ಎಲ್ಲೇ ಇರಲಿ ಕ್ಷೇಮವಾಗಿದ್ದಾರಲ್ಲಾ ಅಷ್ಟೇ ಸಾಕು ಎಂಬುದು ಅವರ ಅಭಿಮಾನಿಗಳ ಹಾರೈಕೆ. (ಏಜೆನ್ಸೀಸ್)