Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಾರಾ ದಂಪತಿ ಸ್ನೇಹಾ ಪ್ರಸನ್ನ ಮಧುಚಂದ್ರಕ್ಕೆ ಬ್ರೇಕ್
ಒಂದು ವಾರದ ಹಿಂದಷ್ಟೇ ಪ್ರಸನ್ನ ಕೈಹಿಡಿದ ಕನ್ನಡ, ತೆಲುಗು ಹಾಗೂ ತಮಿಳು ತಾರೆ ಸ್ನೇಹಾ ಇನ್ನೇನು ಮಧುಚಂದ್ರಕ್ಕೆ ಯು.ಎಸ್ ವಿಮಾನ ಹತ್ತುವುದರಲ್ಲಿದ್ದರು. ಆದರೆ ಅಷ್ಟರಲ್ಲಾಗಲೇ ಆಕೆಯ ಮಧುಚಂದ್ರಕ್ಕೆ ಸಡನ್ನಾಗಿ ಬ್ರೇಕ್ ಬಿದ್ದಿದೆ.
ಹನಿಮೂನ್ಗೆ ಹೋಗುವುದನ್ನು ಬಿಟ್ಟು ಚಿತ್ರೀಕರಣಕ್ಕೆ ಆಗಮಿಸಿದ್ದಾರೆ ಸ್ನೇಹಾ. ಕನ್ನಡದ ಕಿಶೋರ್ ಮುಖ್ಯಭೂಮಿಕೆಯಲ್ಲಿರುವ ತಮಿಳು ಚಿತ್ರ ಹರಿದಾಸ್ ಚಿತ್ರೀಕರಣದಲ್ಲಿ ಸ್ನೇಹಾ ಈಗ ಬಿಜಿಯಾಗಿದ್ದಾರೆ. ತಮ್ಮ ಹೃದಯಕ್ಕೆ ಹತ್ತಿರವಾದ ಕಥಾಹಂದರ ಈ ಚಿತ್ರಕ್ಕಿದೆಯಂತೆ.
'ಹರಿದಾಸ್' ಚಿತ್ರದಲ್ಲಿ ಸ್ನೇಹಾ ಅವರದು ನಿರ್ಣಾಯಕ ಪಾತ್ರವಂತೆ. ಎಂಟು ವರ್ಷ ಬಾಲಕನೊಬ್ಬನ ಸುತ್ತ ಕತೆ ಸುತ್ತುತ್ತದೆ. ಹರಿದಾಸ್ ಚಿತ್ರಕ್ಕಾಗಿ ರಜನಿಕಾಂತ್ ಅವರ ಮಹತ್ವಾಕಾಂಕ್ಷಿ ಚಿತ್ರ 'ಕೋಚಡಯಾನ್'ನಿಂದಲೂ ಹೊರಬಂದಿದ್ದರು ಸ್ನೇಹಾ.
ಚಿತ್ರಕತೆ ಸಿಕ್ಕಾಪಟ್ಟೆ ಇಷ್ಟವಾಯಿತು. ಹಾಗಾಗಿ ಕೂಡಲೆ ಈ ಚಿತ್ರವನ್ನು ಒಪ್ಪಿಕೊಂಡಿದ್ದೇನೆ. ತಾನು ಇದುವರೆಗೂ ಕೇಳಿರುವ 80 ಚಿತ್ರಕತೆಗಳಲ್ಲಿ ಹರಿದಾಸ್ನಷ್ಟು ಯಾವುದೂ ತಮ್ಮನ್ನು ಕಾಡಲಿಲ್ಲ ಎಂದಿದ್ದಾರೆ ಸ್ನೇಹಾ. ಅದೆಲ್ಲಾ ಸರಿ ಪಾಪ ಹನಿಮೂನ್ ಧ್ಯಾನದಲ್ಲಿದ್ದ ಪ್ರಸನ್ನ ಪ್ರಾಬ್ಲಂ ಯಾರಿಗೇಳೋಣ! (ಏಜೆನ್ಸೀಸ್)