Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀದೇವಿ ಅಗಲಿಕೆ : ನೋವಿನಲ್ಲಿ ನಟ ಶಿವರಾಜ್ ಕುಮಾರ್ ಮಾತು
ನಟಿ ಶ್ರೀ ದೇವಿ ನಿಧನಕ್ಕೆ ಗಣ್ಯತಿಗಣ್ಯರು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗದ ನಟ, ನಟಿಯರು ಸಹ ಅವರ ಬಗ್ಗೆ ಮಾತನಾಡಿದ್ದಾರೆ. ಸದ್ಯ ನಟ ಶಿವರಾಜ್ ಕುಮಾರ್ ಶ್ರೀದೇವಿ ನಿಧನದ ಬಗ್ಗೆ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಶ್ರೀ ದೇವಿ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್ ''ಅವರು ಇಲ್ಲ ಅಂತ ಕೇಳುವುದಕ್ಕೆ ತುಂಬ ನೋವಾಗುತ್ತದೆ. ನನಗಿಂತ ಅವರು ಒಂದು ವರ್ಷ ಚಿಕ್ಕವರು. ಅವರ ಅನೇಕ ಸಿನಿಮಾಗಳನ್ನು ನೋಡಿದ್ದೇನೆ. ಸುಂದರವಾದ ಮತ್ತು ಒಳ್ಳೆಯ ನಟಿ ಅವರು. ನಾವು ಆಗ ಕಮಲ್ ಹಾಸನ್ ಹಾಗೂ ಶ್ರೀದೇವಿ ಜೋಡಿಯ ಸಿನಿಮಾವನ್ನು ಖುಷಿಯಿಂದ ನೋಡುತ್ತಿದ್ದೆವು. ಎಲ್ಲ ಪಾತ್ರಗಳಿಗೂ ಅವರು ಸೂಟ್ ಆಗುತ್ತಿದ್ದರು. ಸೌತ್ ಇಂಡಿಯಾ ದಿಂದ ಹೋಗಿ ಇಂಡಿಯಾದ ನಂಬರ್ 1 ನಟಿ ಆಗಿರುವುದು ನಮ್ಮಗೆಲ್ಲ ಹೆಮ್ಮೆಯ ವಿಷಯ.'' ಎಂದು ಹೇಳಿದ್ದಾರೆ.
ಹೃದಯಾಘಾತದಿಂದ ಬಾಲಿವುಡ್ ನಟಿ ಶ್ರೀದೇವಿ ನಿಧನ
ಜೊತೆಗೆ ಈ ಹಿಂದೆ ಶ್ರೀ ದೇವಿ ಅವರನ್ನು ಎರಡು ಬಾರಿ ಶಿವಣ್ಣ ಭೇಟಿ ಆಗಿದ್ದು, ಅವರು ಇಲ್ಲ ಎನ್ನುವ ಸುದ್ದಿಯನ್ನು ಜೀರ್ಣ ಮಾಡಿಕೊಳ್ಳಲು ಆಗುತ್ತಿಲ್ಲ. ಎಂದು ತಮ್ಮ ದುಖಃವನ್ನು ಶಿವರಾಜ್ ಕುಮಾರ್ ಹಂಚಿಕೊಂಡಿದ್ದಾರೆ. ಅಂದಹಾಗೆ, ಕನ್ನಡದ ನಟಿಯರಾದ, ತಾರ, ಶೃತಿ, ಮಾಲಾಶ್ರೀ, ಸುಧಾರಾಣಿ, ಲಕ್ಷ್ಮಿ ಸೇರಿದಂತೆ ಅನೇಕ ನಟಿಯರು ಕೂಡ ಶ್ರೀದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಅಂದಹಾಗೆ, ಬಾಲಿವುಡ್ ನ ಹಿರಿಯ ನಟಿ ಶ್ರೀದೇವಿ(54) ಹೃದಯಾಘಾತದಿಂದ ದುಬೈನಲ್ಲಿ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಶ್ರೀದೇವಿ ತಮ್ಮ ಪತಿ ಬೋನಿ ಕಪೂರ್ ಮತ್ತು ಪುತ್ರಿ ಖುಷಿ ಜೊತೆ ದುಬೈಗೆ ಹಾರಿದ್ದರು. ದುಬೈನಲ್ಲಿ ಮೋಹಿತ್ ಮಾರ್ವಾ ವಿವಾಹ ಮಹೋತ್ಸವ ಇದ್ದ ಕಾರಣ ಇಡೀ ಕಪೂರ್ ಫ್ಯಾಮಿಲಿ ಅಲ್ಲಿಗೆ ತೆರಳಿತ್ತು. ಈ ವೇಳೆ ಈ ಘಟನೆ ನಡೆದಿದೆ.